Webdunia - Bharat's app for daily news and videos

Install App

ವಿಶ್ವಕಪ್‌ ವಿಜೇತ ಭಾರತ ತಂಡದ ವಿಜಯೋತ್ಸವ: 11 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

Sampriya
ಶುಕ್ರವಾರ, 5 ಜುಲೈ 2024 (14:09 IST)
Photo Courtesy X
ಮುಂಬೈ:  ಟ್ವೆಂಟಿ ಕ್ರಿಕೆಟ್‌ ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ನಡೆಯಿತು. ಈ ವೇಳೆ ಲಕ್ಷಾಂತರ ಮಂದಿ ಸೇರಿದಿದ್ದರಿಂದ ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ವರದಿಯಾಗಿವೆ.

ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮದಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗಾಯ ಮತ್ತು ಗುಂಪಿನಲ್ಲಿ ಉಸಿರಾಟ ಸಮಸ್ಯೆ ಉಂಟಾಗಿ 9 ಮಂದಿ ಜಿಟಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

ಒಬ್ಬರನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಬ್ಬರು ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ಅಪಾರ ಪ್ರಮಾಣದ ಅಭಿಮಾನಿಗಳು ಮಳೆಯ ನಡುವೆಯೂ ತಮ್ಮ ನೆಚ್ಚಿನ ಆಟಗಾರರಿಗೆ ಶುಭಾಶಯ ತಿಳಿಸಿದರು.

ಕಳೆದ ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಮಣಿಸಿದ್ದ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments