Webdunia - Bharat's app for daily news and videos

Install App

ಧಾರಾವಾಹಿಗಳಲ್ಲಿ ಬಾಲ 'ಕಾರ್ಮಿಕ'ರು: ಸರಕಾರ ಕ್ರಮ

Webdunia
ಗುರುವಾರ, 11 ಜೂನ್ 2009 (20:27 IST)
ಧಾರಾವಾಹಿಗಳಲ್ಲಿ ನಟಿಸಲು ಮಕ್ಕಳನ್ನು ಕಳುಹಿಸುವ ಪೋಷಕರಿಗೆ ಇದು ಎಚ್ಚರಿಕೆಯ ಕರೆಗಂಟೆ. ಜೈ ಶ್ರೀಕೃಷ್ಣ, ಬಾಲಿಕಾ ವಧು ಮುಂತಾದ ಟೆಲಿ ಧಾರಾವಾಹಿಗಳಲ್ಲಿ ಮಕ್ಕಳನ್ನು ದುಡಿಸಿಕೊಂಡ ಚಿತ್ರ ನಿರ್ಮಾಪಕರ ಮೇಲೆ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರಕಾರ ನಿರ್ಣಯ ಕೈಗೊಂಡಿದೆ.

ಬಾಲ ಕಾರ್ಮಿಕ ಕಾಯ್ದೆಯ ಅನುಸಾರ ಕಳೆದ ಡಿಸೆಂಬರ್ ತಿಂಗಳಲ್ಲಿ ಕಾರ್ಮಿಕ ಸಚಿವಾಲಯವು ಈ ಧಾರಾವಾಹಿಗಳ ನಿರ್ಮಾಪಕರಿಗೆ ಶೋಕಾಸ್ ನೋಟೀಸ್ ಜಾರಿಗೊಳಿಸಿ, ಈ ಬಾಲ ಕಾರ್ಮಿಕರ (ನಟರ) ದುಡಿತದ ಅವಧಿ ಮತ್ತು ಪರಿಸ್ಥಿತಿಯ ಬಗ್ಗೆ ತಿಳಿಸುವಂತೆ ಕೋರಿತ್ತು. ಆದರೆ ಯಾವುದೇ ಉತ್ತರ ದೊರೆತಿರಲಿಲ್ಲ.

ಸುದ್ದಿಗಾರರಿಗೆ ಗುರುವಾರ ಈ ವಿಷಯ ತಿಳಿಸಿದ ಕಾರ್ಮಿಕ ಸಚಿವ ನವಾಬ್ ಮಲಿಕ್, ಒಂದೆರಡು ದಿನಗಳಲ್ಲೇ ಈ ಧಾರಾವಾಹಿ ನಿರ್ಮಾಪಕರ ವಿರುದ್ಧ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದಾವೆ ಹೂಡಲಾಗುತ್ತದೆ ಎಂದಿದ್ದಾರೆ.

ಮಹಾರಾಷ್ಟ್ರ ಸರಕಾರದ ಕೆಂಗಣ್ಣಿಗೆ ಗುರಿಯಾಗಿರುವವರಲ್ಲಿ ಜನಪ್ರಿಯ ಧಾರಾವಾಹಿಗಳಾದ ಜೈ ಶ್ರೀಕೃಷ್ಣ, ಉತ್ತಾರಣ್, ಬಾಲಿಕಾ ವಧು, ಛೋಟೇ ಮಿಂಯಾ, ಚಕ್ ದೇ ಬಚ್ಚೇ, ಛೋಟೇ ಪ್ಯಾಕೆಟ್ ಬಡಾ ಧಮಾಕಾ ಮತ್ತು ಮಾಯ್ಕಾ ಸೀರಿಯಲ್‌ಗಳ ನಿರ್ಮಾಪಕರು ಸೇರಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments