Webdunia - Bharat's app for daily news and videos

Install App

‘ಅಗ್ನಿಸಾಕ್ಷಿ’ ಸನ್ನಿಧಿಗೆ ಆಕ್ಸಿಡೆಂಟ್! ಫೋಟೋ ವೈರಲ್

Webdunia
ಬುಧವಾರ, 3 ಏಪ್ರಿಲ್ 2019 (09:45 IST)
ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮೂಡಿಬರುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಇದೀಗ ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ನಾಯಕ ಸಿದ್ಧಾರ್ಥ್ ರಿಯಲ್ ಲೈಫ್ ನಲ್ಲಿ ಮದುವೆಯಾದ ಮೇಲೆ ಧಾರವಾಹಿಯಲ್ಲಿ ಕಾಣಿಸಿಕೊಂಡಿಲ್ಲ. ಆದರೆ ನಾಯಕಿ ಸನ್ನಿಧಿ ಆಸ್ಪತ್ರೆ ಸೇರಿರುವ ಫೋಟೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ತಲೆಗೆ ಪೆಟ್ಟು ಮಾಡಿಕೊಂಡು ಬ್ಯಾಂಡೇಜ್ ಸುತ್ತಿಕೊಂಡು ಸನ್ನಿಧಿ ಆಸ್ಪತ್ರೆ ಬೆಡ್ ನಲ್ಲಿ ನಗುತ್ತಾ ಮಲಗಿರುವ ಫೋಟೋ ಒಂದನ್ನು ಅಗ್ನಿಸಾಕ್ಷಿ ಫ್ಯಾನ್ ಪೇಜ್ ಇನ್ ಸ್ಟಾಗ್ರಾಂನಲ್ಲಿ ಹರಿಯಬಿಟ್ಟಿದೆ. ಈ ಫೋಟೋ ನೋಡಿ ಹಲವರು ಸನ್ನಿಧಿಗೆ ನಿಜವಾಗಿಯೂ ಆಕ್ಸಿಡೆಂಟ್ ಆಯ್ತೇನೋ ಎನ್ನುವಂತೆ ಕಾಳಜಿಯಿಂದ ಮೆಸೇಜ್ ಮಾಡುತ್ತಿದ್ದಾರೆ.

ಆದರೆ ಇದೆಲ್ಲಾ ಶೂಟಿಂಗ್ ಭಾಗವಾಗಿದ್ದು, ಮುಂದಿನ ಸಂಚಿಕೆಯಲ್ಲಿ ಸನ್ನಿಧಿಗೆ ಆಕ್ಸಿಡೆಂಟ್ ಆಗುವ ಸನ್ನಿವೇಶವಿರುವುದು ಪಕ್ಕಾ ಆಗಿದೆ. ಈಗಾಗಲೇ ರಾಧಿಕಾಗೆ ನಿಜ ವಿಚಾರ ಗೊತ್ತಾಗಿದ್ದು, ವಿಲನ್ ಚಂದ್ರಿಕಾ ಆಟಕ್ಕೆ ತೆರೆ ಬಿದ್ದಿದೆ. ಸಿದ್ಧಾರ್ಥ್ ಎಲ್ಲಿದ್ದಾನೋ ಗೊತ್ತಿಲ್ಲ. ಆದರೆ ಇದೀಗ ಸನ್ನಿಧಿಗೂ ಏಟು ಮಾಡಿಕೊಂಡು ಮಲಗಿರುವ ಫೋಟೋ ನೋಡಿ ಅಭಿಮಾನಿಗಳು ಏನಾಗುತ್ತೋ ಎಂದು ಕಾಯುವಂತೆ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments