Webdunia - Bharat's app for daily news and videos

Install App

ಜೊತೆ ಜೊತೆಯಲಿ ಕೊನೇ ದಿನ ತಂಡದೊಂದಿಗೆ ಅನಿರುದ್ಧ್ ಜತ್ಕಾರ್!

Webdunia
ಶನಿವಾರ, 20 ಮೇ 2023 (14:08 IST)
Photo Courtesy: facebook
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಕೊನೆಯ ಎಪಿಸೋಡ್ ನಿನ್ನೆ ರಾತ್ರಿ ಪ್ರಸಾರವಾಗಿದ್ದು, ಧಾರವಾಹಿ ಮುಕ್ತಾಯಗೊಂಡಿದೆ.

ಇದರ ಬೆನ್ನಲ್ಲೇ ಕಲಾವಿದರು, ನಿರ್ದೇಶಕ ಆರೂರು ಜಗದೀಶ್ ಪ್ರೇಕ್ಷಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕಲಾವಿದರು ಕೊನೆಯ ದಿನದ ಚಿತ್ರೀಕರಣದ ಫೋಟೋಗಳನ್ನು ಹಂಚಿಕೊಂಡು ಭಾವುಕರಾಗಿದ್ದಾರೆ.

ವಿಶೇಷವೆಂದರೆ ಧಾರವಾಹಿ ತಂಡದೊಂದಿಗೆ ನಟ ಅನಿರುದ್ಧ್ ಜತ್ಕಾರ್ ಮತ್ತು ಪತ್ನಿ ಕೀರ್ತಿ ವರ್ಧನ್ ಕೂಡಾ ಕಾಣಿಸಿಕೊಂಡಿದ್ದಾರೆ. ಜೊತೆ ಜೊತೆಯಲಿ ಧಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರದ ಮೂಲಕ ಮಿಂಚಿದ್ದ ಅನಿರುದ್ಧ್ ಬಳಿಕ ವಿವಾದದಿಂದಾಗಿ ಧಾರವಾಹಿಯಿಂದ ಹೊರನಡೆದಿದ್ದರು. ಅವರ ಸ್ಥಾನಕ್ಕೆ ಹರೀಶ್ ರಾಜ್ ಬಂದಿದ್ದರು.

ಆದರೆ ಅನಿರುದ್ಧ್ ಹೊರನಡೆಯುತ್ತಿದ್ದಂತೇ ಧಾರವಾಹಿಯ ಟಿಆರ್ ಪಿ ಕಡಿಮೆಯಾಗಿತ್ತು. ಹಾಗಿದ್ದರೂ ಇಷ್ಟು ದಿನಗಳ ಕಾಲ ಧಾರವಾಹಿ ಮುಂದುವರಿಸಲಾಗಿತ್ತು. ಈ ಧಾರವಾಹಿಯಲ್ಲಿ ನಾಯಕಿ ಅನು ಸಿರಿಮನೆ ಪಾತ್ರದ ಮನೆಯ ಚಿತ್ರೀಕರಣ ನಡೆಸುತ್ತಿದ್ದ ಬಸವನಗುಡಿಯ ಶೂಟಿಂಗ್ ಮನೆ ಮಾಲಿಕರು ಧಾರವಾಹಿ ತಂಡಕ್ಕೆ ವಿಶೇಷ ಔತಣ ಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ ಎಲ್ಲಾ ಕಲಾವಿದರ ಜೊತೆ ಅನಿರುದ್ಧ್ ಕೂಡಾ ಆಗಮಿಸಿದ್ದರು. ಕೊನೆಯ ದಿನದ ಫೋಟೋ ಸೆಷನ್ ನಲ್ಲಿ ಅನಿರುದ್ಧ್ ಅವರನ್ನು ನೋಡಿದ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments