Webdunia - Bharat's app for daily news and videos

Install App

ಸಿಎಂ ಸಿದ್ದು, ಡಿಕೆಶಿ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್

Krishnaveni K
ಬುಧವಾರ, 14 ಫೆಬ್ರವರಿ 2024 (15:49 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿಜೇತ ಕಾರ್ತಿಕ್ ಮಹೇಶ್ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಬಿಗ್ ಬಾಸ್ ವಿನ್ ಆದ ಮೇಲೆ ಕಾರ್ತಿಕ್ ಮಹೇಶ್ ಜನಪ್ರಿಯತೆ ಹೆಚ್ಚಾಗಿದೆ. ಎಲ್ಲೇ ಹೋದರೂ ಜನ ಅವರನ್ನು ಗುರುತಿಸುತ್ತಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ಮೇಲೆ ಪುನೀತ್ ರಾಜ್ ಕುಮಾರ್ ಸಮಾಧಿಗೆ ಭೇಟಿ ನೀಡಿ ಕಪ್ ನ್ನು ಸಮಾಧಿ ಮುಂದೆ ಇಟ್ಟು ನಮನ ಸಲ್ಲಿಸಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಕೈಗೆ ಕಪ್ ಒಪ್ಪಿಸಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಕೂಡಾ ಇದ್ದರು. ಬಿಗ್ ಬಾಸ್ ಕಪ್ ಸಮೇತ ಬಂದಾಗ ಕಾರ್ತಿಕ್ ಯಾರು, ಏನು ಎಂದೆಲ್ಲಾ ವಿಚಾರಿಸಿಕೊಂಡಿದ್ದಾರೆ. ಬಳಿಕ ಕಾರ್ತಿಕ್ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಫೋಟೋ ತೆಗೆದುಕೊಂಡ್ರಾ ಎಂದು ಖಚಿತಪಡಿಸಿಕೊಂಡು ಮುಖ್ಯಮಂತ್ರಿಗಳು ಅಲ್ಲಿಂದ ತೆರಳಿದ್ದಾರೆ. ಬಳಿಕ ಡಿಕೆ ಶಿವಕುಮಾರ್ ಅವರ ಜೊತೆಗೂ ಕಾರ್ತಿಕ್ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ಡಿಕೆಶಿ ನಿಮ್ಮ ಹೆಸರೇನು ಎಂದು ಕಾರ್ತಿಕ್ ಅವರನ್ನು ಪರಿಚಯಮಾಡಿಕೊಂಡಿದ್ದಾರೆ. ಬಳಿಕ ಶುಭಾಶಯ ತಿಳಿಸಿ ತೆರಳಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments