Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಕನ್ನಡ 10: ಸ್ಪರ್ಧಿಗಳ ಮೇಲೆ ಕಿಚ್ಚ ಸುದೀಪ್ ಅಸಮಾಧಾನ

ಬಿಗ್ ಬಾಸ್ ಕನ್ನಡ 10: ಸ್ಪರ್ಧಿಗಳ ಮೇಲೆ ಕಿಚ್ಚ ಸುದೀಪ್ ಅಸಮಾಧಾನ
ಬೆಂಗಳೂರು , ಶನಿವಾರ, 18 ನವೆಂಬರ್ 2023 (17:03 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ಯಾಕೋ ಸ್ಪರ್ಧಿಗಳ ವರ್ತನೆ, ಕೇಸು ಅಂತಲೇ ಸುದ್ದಿಯಾಗುತ್ತಿದೆ. ಈ ನಡುವೆ ಈ ವಾರ ಕಿಚ್ಚ ಸುದೀಪ್ ಸ್ಪರ್ಧಿಗಳ ಮೇಲೆ ಅಸಮಾಧಾನ ಬಹಿರಂಗವಾಗಿಯೇ ಹೊರಹಾಕಿದ್ದಾರೆ.

ಕಿಚ್ಚ ಸುದೀಪ್ ಸಾಮಾನ್ಯವಾಗಿ ಶನಿವಾರ ವಾರದ ಇಡೀ ಕತೆ ಮಾತನಾಡಿ ಭಾನುವಾರ ಒಬ್ಬ ಸ್ಪರ್ಧಿಯನ್ನು ಎಲಿಮಿನೇಟ್ ಆಗಿರುವುದಾಗಿ ಘೋಷಿಸುತ್ತಾರೆ. ಆದರೆ ಈ ವಾರ ಶನಿವಾರ ಒಬ್ಬ ಸ್ಪರ್ಧಿ ಎಲಿಮಿನೇಟ್ ಆಗುತ್ತಿದ್ದಾರೆ.

ಇದರ ನಡುವೆ ಆರಂಭದಿಂದಲೇ ಸುದೀಪ್ ಸ್ಪರ್ಧಿಗಳ ಜೊತೆ ಅಸಮಾಧಾನದಿಂದಲೇ ಮಾತನಾಡುತ್ತಿರುವ ಪ್ರೋಮೋ ಪ್ರಕಟವಾಗಿದೆ. ಹೀಗಾಗಿ ಮನೆಯ ಸದಸ್ಯರ ವರ್ತನೆಗಳು, ಇತ್ತೀಚೆಗಿನ ಕೆಲವು ವಿವಾದಗಳಿಂದ ಸುದೀಪ್ ಗೆ ಈ ಬಾರಿಯ ಬಿಗ್ ಬಾಸ್ ಸಾಕೆನ್ನಿಸಿದೆಯೇ ಎಂಬ ಅನುಮಾನ ಮೂಡಿದೆ.

ಇತ್ತೀಚೆಗಷ್ಟೇ ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಅದರ ನಡುವೆ ಮಹಿಳಾ ಸ್ಪರ್ಧಿಗಳ ಬಗ್ಗೆ ಪುರುಷ ಸ್ಪರ್ಧಿಗಳು ಹೇಳಿದ್ದ ಕೆಲವೊಂದು ಶಬ್ಧಗಳು ಭಾರೀ ಟೀಕೆಗೊಳಗಾಗಿತ್ತು. ಇದರ ಬೆನ್ನಲ್ಲೇ ವರ್ತೂರು ಸಂತೋಷ್ ಮನೆಯಿಂದ ಹೊರಹೋಗುವುದಾಗಿ ಹಠ ಹಿಡಿದಿದ್ದರು. ಅದಾದ ಕೆಲವೇ ಸಮಯದಲ್ಲಿ ತನಿಷಾ ಕುಪ್ಪಂಡ ಭೋವಿ ಸಮುದಾಯಕ್ಕೆ ಅವಹೇಳನ ಮಾಡಿದ ಆರೋಪದಲ್ಲಿ ಕೇಸು ಜಡಿಸಿಕೊಂಡಿದ್ದಾರೆ. ಈ ಎಲ್ಲಾ ವಿವಾದಗಳು ಕಿಚ್ಚನ ತಾಳ್ಮೆಗೆಡಿಸಿವೆಯೇ ಎಂಬ ಅನುಮಾನ ಮೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಕನ್ನಡ 10: ಈ ವಾರ ಮನೆಯಿಂದ ಹೊರಹೋಗಲಿರುವ ಸ್ಪರ್ಧಿ ಯಾರು?