Webdunia - Bharat's app for daily news and videos

Install App

ಬಿಬಿಕೆ10: ಕಿಚ್ಚ ಸುದೀಪ್ ದಯೆಯಿಂದ ಬಚಾವ್ ಆದ ಸ್ಪರ್ಧಿಗಳು

Webdunia
ಸೋಮವಾರ, 4 ಡಿಸೆಂಬರ್ 2023 (09:58 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಈ ವಾರ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ದಯೆ ಸಿಕ್ಕಿದೆ. ಇದರಿಂದಾಗಿ ಸ್ಪರ್ಧಿಗಳು ಎಲಿಮಿನೇಷನ್ ತೂಗುಗತ್ತಿಯಿಂದ ಬಚಾವ್ ಆಗಿದ್ದಾರೆ.

ಈ ವಾರ ಮನೆಯಿಂದ ಹೊರಹೋಗಲು 8 ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಘಟಾನುಘಟಿ ಸ್ಪರ್ಧಿಗಳ ಪೈಕಿ ಮೈಕಲ್ ಅಥವಾ ಸ್ನೇಹಿತ್ ಹೊರಹೋಗಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು.

ಆದರೆ ಕಿಚ್ಚ ಸುದೀಪ್ ಇದುವರೆಗೆ ಬಳಸಿರದ ವಿಶೇಷ ಅಧಿಕಾರವೊಂದನ್ನು ಬಳಸಿ ಸ್ಪರ್ಧಿಗಳನ್ನು ಈ ವಾರ ಎಲಿಮಿನೇಷನ್ ನಿಂದ ಕಾಪಾಡಿದ್ದಾರೆ. ಹೀಗಾಗಿ ಈ ವಾರ ಯಾವುದೇ ಸ್ಪರ್ಧಿ ಎಲಿಮಿನೇಟ್ ಆಗಿಲ್ಲ.

ಶನಿವಾರದ ಎಪಿಸೋಡ್ ನಲ್ಲಿ ವರ್ತೂರು ಸಂತೋಷ್, ನಮ್ರತಾ, ಡ್ರೋಣ್ ಪ್ರತಾಪ್ ಸೇಫ್ ಆಗಿದ್ದರು. ಭಾನುವಾರ ಮೊದಲು ವಿನಯ್, ಸಂಗೀತಾ, ತನಿಷಾ ಸೇಫ್ ಆದರು. ಕೊನೆಗೆ ಮೈಕಲ್ ಮತ್ತು  ಸ್ನೇಹಿತ್ ಉಳಿದುಕೊಂಡರು. ಆದರೆ ಈ ವಾರ ಇಬ್ಬರೂ ಚೆನ್ನಾಗಿ ಆಡಿದ್ದರಲ್ಲದೆ, ಸ್ನೇಹಿತ್ ಕ್ಯಾಪ್ಟನ್ ಆಗಿಯೂ ಆಯ್ಕೆಯಾಗಿದ್ದರು. ಹೀಗಾಗಿ ಸುದೀಪ್ ವಿಶೇಷ ಅಧಿಕಾರ ಬಳಸಿ ಇಬ್ಬರನ್ನೂ ಸೇವ್ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments