ಬಿಬಿಕೆ10: ಎಲಿಮಿನೇಷನ್ ಭಯದಿಂದ ಹೊಸ ನಿರ್ಧಾರ ಕೈಗೊಂಡ ವಿನಯ್

Webdunia
ಮಂಗಳವಾರ, 26 ಡಿಸೆಂಬರ್ 2023 (10:55 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಇಷ್ಟು ದಿನ ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದ ವಿನಯ್ ಗೌಡ ಇದ್ದಕ್ಕಿದ್ದಂತೆ ತಣ್ಣಗಾಗಲು ನಿರ್ಧರಿಸಿದ್ದಾರೆ.

ವಿನಯ್ ಗೌಡ ಈ ಸೀಸನ್ ನಲ್ಲಿ ಹಲವಾರು ಬಾರಿ ಅಗ್ರೆಸಿವ್ ವರ್ತನೆಗಳಿಂದಲೇ ವಿವಾದಕ್ಕೀಡಾಗಿದ್ದರು. ಮನೆಯವರೂ ಅವರ ಮೇಲೆ ಸಾಕಷ್ಟು ಬಾರಿ ಆಕ್ರೋಶ ವ್ಯಕ್ತಪಡಿಸಿದ್ದೂ ಇದೆ.

ಆದರೆ ವೀಕ್ಷಕರಿಗೂ ವಿನಯ್ ವರ್ತನೆ ಅಸಮಾಧಾನ ತಂದಿತ್ತು. ಕಿಚ್ಚ ಸುದೀಪ್ ಒಮ್ಮೆಯಾದರೂ ಅವರ ವರ್ತನೆಯನ್ನು ಪ್ರಶ್ನಿಸಬೇಕು ಎಂದು ಅಭಿಪ್ರಾಯಪಟ್ಟಿದ್ದೂ ಇದೆ. ಇದೀಗ ಮನೆಗೆ ಈ ವಾರಂತ್ಯದಲ್ಲಿ ಭೇಟಿ ಕೊಟ್ಟಿದ್ದ ಶೈನ್ ಶೆಟ್ಟಿ ವಿನಯ್ ಗೆ ಇದನ್ನು ಸೂಕ್ಷ್ಮವಾಗಿ ಹೇಳಿದ್ದರು. ಅಗ್ರೆಸಿವ್ ಆಗಿದ್ದರೆ ಪರಿಣಾಮ ಸರಿ ಇರಲ್ಲ, ಎಚ್ಚರಿಕೆಯಿಂದ ಆಡಿದರೆ ಉಳಿದುಕೊಳ್ಳಬಹುದು ಎಂದು ಸಂದೇಶ ರವಾನಿಸಿದ್ದರು.

ಹೀಗಾಗಿ ಬಳಿಕ ವಿನಯ್ ನಾನು ಇನ್ನು ಮುಂದೆ ಯಾವುದೇ ಕಾರಣಕ್ಕೂ ಅಗ್ರೆಸಿವ್ ಆಗಿರುವುದಿಲ್ಲ. ಯಾವುದೇ ಕಾರಣಕ್ಕೂ ಪ್ರವೋಕ್ ಆಗಲ್ಲ ಎಂದು ಮನೆಯ ಸದಸ್ಯರಿಗೆ ಹೇಳಿಕೊಂಡಿದ್ದಾರೆ. ಅದನ್ನು ತಮ್ಮ ವರ್ತನೆ ಮೂಲಕವೂ ತೋರಿಸುತ್ತಿದ್ದಾರೆ. ಎಲ್ಲರ ಜೊತೆಗೆ ಚೆನ್ನಾಗಿರಲು ಪ್ರಯತ್ನಿಸುತ್ತಿದ್ದಾರೆ. ಎಲ್ಲವನ್ನೂ ತಮಾಷೆಯಾಗಿಯೇ ಸ್ವೀಕರಿಸುತ್ತಿದ್ದಾರೆ. ಅವರ ಈ ಬದಲಾವಣೆ ಎಷ್ಟು ದಿನ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಮುಂದಿನ ಸುದ್ದಿ
Show comments