Webdunia - Bharat's app for daily news and videos

Install App

ಬಿಗ್ ಬಾಸ್ ಸೋತರೂ ಈ ಸ್ಪರ್ಧಿಗಳ ಜೇಬು ಭರ್ತಿ!

Webdunia
ಸೋಮವಾರ, 3 ಫೆಬ್ರವರಿ 2020 (11:25 IST)
ಬೆಂಗಳೂರು: ಬಿಗ್ ಬಾಸ್ ಏಳನೇ ಆವೃತ್ತಿ ನಿನ್ನೆ  ಕೊನೆಯಾಗಿದ್ದು ಶೈನ್ ಶೆಟ್ಟಿ ವಿಜೇತರಾಗಿ 61 ಲಕ್ಷ ರೂ. ಬಹುಮಾನವಾಗಿ ಪಡೆದಿದ್ದಾರೆ.


ಆದರೆ ಫೈನಲಿಸ್ಟ್ ಗಳಾಗಿ ಅಂತಿಮ ಹಂತದಲ್ಲಿ ಟ್ರೋಫಿ ಗೆಲ್ಲಲು ವಿಫಲರಾದ ದೀಪಿಕಾ ದಾಸ್, ಕುರಿ ಪ್ರತಾಪ್, ವಾಸುಕಿ ವೈಭವ್ ಮತ್ತು ಭೂಮಿ ಶೆಟ್ಟಿಗೆ ಬಿಗ್ ಬಾಸ್ ಏನೂ ಲಾಸ್ ಮಾಡಿಲ್ಲ.

ಕುರಿ ಪ್ರತಾಪ್ ರನ್ನರ್ ಅಪ್ ಆಗಿ ಆರು ಲಕ್ಷ ರೂ.ಗಳನ್ನು ಜೇಬಿಗಿಳಿಸಿಕೊಂಡಿದ್ದಾರೆ. ಇನ್ನು ದೀಪಿಕಾ ದಾಸ್ ಬಿಗ್ ಬಾಸ್ ಮನೆಯಲ್ಲಿದ್ದಾಗ ಮಾಡಿದ್ದ ಟಾಸ್ಕ್ ವಿಜೇತರಾಗಿ ಐದು ಲಕ್ಷ ರೂ. ಬಹುಮಾನದ ಚೆಕ್ ಪಡೆದಿದ್ದಾರೆ. ಫೈನಲಿಸ್ಟ್ ಗಳ ಪೈಕಿ ಮೊದಲನೆಯವರಾಗಿ ಹೊರಬಿದ್ದ ಭೂಮಿ ಶೆಟ್ಟಿ ಮತ್ತು ವಾಸುಕಿ ವೈಭವ್ ಕೂಡಾ ತಲಾ ಒಂದು ಲಕ್ಷ ರೂ. ಬಹುಮಾನ ಪಡೆದಿದ್ದಾರೆ. ಇದರ ಜತೆಗೆ  ಈ ಸ್ಪರ್ಧಿಗಳಿಗೆ ಈ ಮೊದಲು ಒಪ್ಪಂದವಾದಂತೆ ಸಂಭಾವನೆಯೂ ಸಿಗಲಿದೆ. ಹೀಗಾಗಿ ಇವರಿಗೆ ಬಿಗ್ ಬಾಸ್ ನಿಂದ ಜೇಬಿಗೆ ಯಾವುದೇ ನಷ್ಟವಾಗಿಲ್ಲ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments