Webdunia - Bharat's app for daily news and videos

Install App

ಬಿಬಿಕೆ9: ಅರುಣ್ ಸಾಗರ್, ನವಾಜ್ ಗೆ ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್

Webdunia
ಭಾನುವಾರ, 2 ಅಕ್ಟೋಬರ್ 2022 (09:30 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 9 ರಲ್ಲಿ ನಿನ್ನೆ ವಾರದ ಕತೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಾದ ಅರುಣ್ ಸಾಗರ್ ಮತ್ತು ನವಾಜ್ ಗೆ ಕಿಚ್ಚ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅರುಣ್ ಸಾಗರ್ ಈ ವಾರ ಪಿರಮಿಡ್ ಟಾಸ್ಕ್ ಸಂದರ್ಭದಲ್ಲಿ ಟಾಸ್ಕ್ ಅರ್ಧಕ್ಕೇ ಬಿಟ್ಟು ಜೋಕ್ ಮಾಡುತ್ತಾ ನಿಂತಿದ್ದರು. ಈ ವಿಚಾರ ಮನೆಯ ಇತರ ಸದಸ್ಯರಿಗೂ ಇಷ್ಟವಾಗಿರಲಿಲ್ಲ. ಇದೇ ಕಾರಣಕ್ಕೆ ಸುದೀಪ್ ನಾಯಕರಾಗುವಲ್ಲಿ ಜೋಕರ್ ಆಗಬೇಡಿ. ಬಿಗ್ ಬಾಸ್ ನೀಡುವ ಯಾವುದೇ ಟಾಸ್ಕ್ ಹಿಂದೆ ಅಷ್ಟು ಪರಿಶ್ರಮವಿರುತ್ತದೆ. ಇದನ್ನು ಜೋಕ್ ಆಗಿ ತೆಗೆದುಕೊಳ್ಳಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಅರುಣ್ ಸಾಗರ್ ನವಾಜ್ ಸಿಟ್ಟಿನಲ್ಲಿ ಯಾರಿಗಾದರೂ ಏನಾದರೂ ಮಾಡ್ತಾರೆ ಎನ್ನುವ ಪರಿಸ್ಥಿತಿ ಇತ್ತು. ಹೀಗಾಗಿ ಅವರ ಮನಸ್ಸು ಬೇರೆಡೆಗೆ ತಿರುಗಿಸಲು ಈ ರೀತಿ ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಸುದೀಪ್ ನವಾಜ್ ಜವಾಬ್ಧಾರಿ ನಿಮ್ಮದಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಅಲ್ಲದೆ, ನವಾಜ್ ಗೂ ಎಚ್ಚರಿಕೆ ನೀಡಿರುವ ಸುದೀಪ್, ಇಲ್ಲಿ ಯಾರಿಗೋ ಹೊಡೀತೀನಿ, ಚುಚ್ತೀನಿ ಎಂದೆಲ್ಲಾ ಹೇಳಬೇಡಿ. ಹಾಗೆ ಮಾಡಿದರೂ ಕೇವಲ ಮನೆಯಿಂದ ಹೊರ ಹಾಕ್ತಾರೆ ಅಷ್ಟೇ ಎಂದು ತಿಳಿದುಕೊಳ್ಳಬೇಡಿ. ಹೊರಗೆ ಬಂದ ಮೇಲೂ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ನವಾಜ್ ಕೂಡಾ ಒಪ್ಪಿಕೊಂಡಿದ್ದು, ನಾನು ತಿದ್ದಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments