Webdunia - Bharat's app for daily news and videos

Install App

ಬಿಗ್ ಬಾಸ್: ವಾಟ್ ಈಸ್ ಗಣರಾಜ್ಯ ಎಂದರು ಆಶಿತಾ!

Webdunia
ಮಂಗಳವಾರ, 21 ನವೆಂಬರ್ 2017 (10:05 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರದ ಕ್ಯಾಪ್ಟನ್ ಆಯ್ಕೆ ಮಾಡಲು ಸ್ಪರ್ಧಿಗಳ ಸಾಮಾನ್ಯ ಜ್ಞಾನ ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ ಆಶಿತಾಗೆ ಗಣರಾಜ್ಯ ದಿನ ಎಂದರೇನು ಎಂದೇ ಗೊತ್ತಾಗಲಿಲ್ಲ.
 

ಬಿಗ್ ಬಾಸ್ ಕೇಳಿದ ಪ್ರಶ್ನೆಗಳಿಗೆ ಸ್ಪರ್ಧಿಗಳು ಉತ್ತರ ಹೇಳಬೇಕಿತ್ತು. ಅತೀ ಹೆಚ್ಚು ಉತ್ತರ ಹೇಳಿದವರು ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾಗುತ್ತಾರೆ. ಅದರಂತೆ ನಿವೇದಿತಾ ಗೌಡ ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾದರು.

ಚಟುವಟಿಕೆಯಲ್ಲಿ ಮೊದಲು ಭಾಗಿಯಾಗಿದ್ದು ನಟಿ ಆಶಿತಾ. ಇವರಿಗೆ ಭಾರತ ಗಣರಾಜ್ಯಗೊಂಡಿದ್ದು ಯಾವಾಗ ಎಂದು ಪ್ರಶ್ನೆ ಕೇಳಲಾಯಿತು. ಆದರೆ ಆಶಿತಾ ವಾಟ್ ಈಸ್ ಗಣರಾಜ್ಯ ಎಂದು ಪ್ರತಿ ಪ್ರಶ್ನೆ ಹಾಕಿದರು. ಅಷ್ಟೇ ಅಲ್ಲ ತಪ್ಪು ಉತ್ತರ ಹೇಳಿದರು. ಅಷ್ಟೇ ಅಲ್ಲ, ಬಾಹುಬಲಿ ಪ್ರತಿಮೆ ಎಲ್ಲಿದೆ ಎಂದರೆ ಬಾಹುಬಲಿ ಸಿನಿಮಾ ಶೂಟಿಂಗ್ ನಡೆದ ಸ್ಥಳದ ಹೆಸರು ಹೇಳಿದರು. ಅಸಲಿಗೆ, ಬಿಗ್ ಬಾಸ್ ಶ್ರವಣ ಬೆಳಗೊಳದ ಬಾಹುಬಲಿ ಮೂರ್ತಿ ಬಗ್ಗೆ ಪ್ರಶ್ನೆ ಕೇಳಿದ್ದರು!

ಇನ್ನು, ಕ್ರಿಕೆಟ್ ಪ್ರಿಯ ಜೆಕೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲು 10 ಸಾವಿರ ರನ್ ಪೂರೈಸಿದ ಕ್ರಿಕೆಟಿಗನ ಹೆಸರು ತಪ್ಪಾಗಿ ಹೇಳಿದ್ದಲ್ಲದೆ, ಹಾಲಿ ರಾಷ್ಟ್ರಪತಿ ಹೆಸರನ್ನೂ ತಪ್ಪಾಗಿ ಉಚ್ಚರಿಸಿ ಅವಕಾಶ ಕಳೆದುಕೊಂಡರು.  ಇನ್ನು ಶ್ರುತಿಗೆ ಭಾರತದ ಪ್ರಥಮ ಪ್ರಜೆ ಎಂದರೇ ಗೊತ್ತಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments