Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ಗೌರಿ ಲಂಕೇಶ್ ಕೊಲೆ ಪ್ರಕರಣ ವಿವರಿಸಿದ ರವಿ ಬೆಳಗೆರೆ

Webdunia
ಬುಧವಾರ, 16 ಅಕ್ಟೋಬರ್ 2019 (09:49 IST)
ಬೆಂಗಳೂರು: ಆರೋಗ್ಯ ಸಮಸ್ಯೆಯಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರ ಹೋಗಿದ್ದ ರವಿ ಬೆಳಗೆರೆ ಕಮ್ ಬ್ಯಾಕ್ ಮಾಡಿದ್ದಾರೆ. ರವಿ ಬೆಳಗೆರೆ ಮನೆಯಿಂದ ಹೊರ ಹೋಗಿದ್ದು ಭಾರೀ ಸುದ್ದಿಯಾಗಿತ್ತು. ಆದರೆ ಈಗ ಚಿಕಿತ್ಸೆ ಬಳಿಕ ಕಮ್ ಬ್ಯಾಕ್ ಮಾಡಿದ್ದಾರೆ. ಆದರೆ ಕೇವಲ ಒಂದು ವಾರ ಮಾತ್ರ!



 
ವೈದ್ಯರ ಸಲಹೆ ಮೇರೆಗೆ ರವಿ ಬೆಳಗೆರೆ ಬಿಗ್ ಬಾಸ್ ನಲ್ಲಿ ಮುಂದುವರಿಯುತ್ತಿಲ್ಲ. ಈ ಶನಿವಾರದವರೆಗೆ ಕೇವಲ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಆದರೆ ರವಿ ಬೆಳಗೆರೆ ಮನೆಯಿಂದ ಹೊರ ಹೋಗುವ ಮೊದಲು ಸ್ಪರ್ಧಿಗಳನ್ನೆಲ್ಲಾ ಕೂರಿಸಿಕೊಂಡು ಕತೆ ಹೇಳಿಕೊಳ್ಳುತ್ತಿರಬೇಕಾದರೆ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ವಿಚಾರ ಪ್ರಸ್ತಾಪಿಸಿದ್ದಾರೆ.

ಗೌರಿ ಲಂಕೇಶ್ ಕೊಲೆಯಾದ ಸಂದರ್ಭವನ್ನು ವಿವರಿಸಿದ ರವಿ ಬೆಳಗೆರೆ ಬಳಿಕ ಈ ಕೊಲೆ ಪ್ರಕರಣದ ಬಗ್ಗೆ ಪೊಲೀಸರು 10 ಸಾವಿರ ಪುಟಗಳ ಎಫ್ ಐಆರ್ ದಾಖಲಿಸಿದ್ದನ್ನೂ ಹೇಳಿಕೊಂಡಿದ್ದಾರೆ. ಬೆಳಗೆರೆ ಕತೆಗೇ ಈಗ ಸಹ ಸ್ಪರ್ಧಿಗಳು ಅವರನ್ನು ಇಷ್ಟಪಡಲು ಆರಂಭಿಸಿದ್ದಾರೆ ಎನ್ನಲು ಅಡ್ಡಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಮುಂದಿನ ಸುದ್ದಿ
Show comments