Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ನುಡಿದಂತೆ ನಡೆಯುತ್ತಾರಾ ಸುದೀಪ್?

Webdunia
ಶನಿವಾರ, 19 ನವೆಂಬರ್ 2016 (15:17 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಮನೆಯಲ್ಲಿ ಪ್ರಥಮ್ ಮೇಲೆ ಹುಚ್ಚ ವೆಂಕಟ್ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿಸಿಕೊಂಡಿದ್ದ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡುವುದಿಲ್ಲ ಎಂದಿದ್ದರು. ಇಂದು ಅವರು ಮಾತು ಉಳಿಸಿಕೊಳ್ಳುತ್ತಾರಾ ಅಥವಾ ವಾಹಿನಿ ಮುಖ್ಯಸ್ಥರು ಅವರ ಮನವೊಲಿಸುತ್ತಾರಾ ಕಾದು ನೋಡಬೇಕು.

ಹುಚ್ಚ ವೆಂಕಟ್ ವರ್ತನೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದ ಸುದೀಪ್ ಆತನಿಗೆ ಶಿಕ್ಷೆಯಾಗುವವರೆಗೂ ತಾನು ಬಿಗ್ ಬಾಸ್ ಕಾರ್ಯಕ್ರಮ ನಿರೂಪಿಸುವುದಿಲ್ಲ ಎಂದು ವೀಕ್ಷಕರಿಗೆ ಭರವಸೆ ನೀಡಿದ್ದರು. ಇದನ್ನು ಟ್ವಿಟರ್ ನಲ್ಲಿ ಪ್ರಕಟಿಸಿದ್ದರು.

ಇಂದು ಶನಿವಾರವಾಗಿದ್ದು, ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ. ಈವತ್ತು ಮತ್ತು ನಾಳೆ ಕಿಚ್ಚ ಸುದೀಪ್ ಬಿಗ್ ಬಾಸ್ ಸ್ಪರ್ಧಿಗಳ ಜತೆ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮ ನಡೆಸಿಕೊಡುತ್ತಾರೆ. ಹಾಗಾಗಿ ಇಂದಿನ ಎಪಿಸೋಡ್ ನ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.  ಮೋಹನ್, ಮಾಳವಿಕಾ, ಪ್ರಥಮ್, ಭುವನ್ ಮತ್ತು ಕಾರುಣ್ಯಾ ರಾಂ ನಾಮಿನೇಟ್ ಆಗಿದ್ದು, ಡೇಂಜರ್ ಝೋನ್ ನಲ್ಲಿದ್ದಾರೆ. ಆದರೆ ಇವರಲ್ಲಿ ಯಾರು ಉಳಿಯುತ್ತಾರೆ, ಯಾರು ಹೊರಹೋಗುತ್ತಾರೆಂದು ಹೇಳಲು ಸುದೀಪ್ ಬರುತ್ತಾರೋ ಅಥವಾ ಸುದೀಪ್ ಬರದೇ ನಾಮಿನೇಟ್ ಆದವರೆಲ್ಲಾ ಈ ವಾರದ ಮಟ್ಟಿಗೆ ಸೇಫ್ ಆಗುತ್ತಾರೋ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments