Webdunia - Bharat's app for daily news and videos

Install App

ಜೊತೆ ಜೊತೆಯಲಿ ಧಾರವಾಹಿ ನಿರ್ದೇಶಕರಿಗೆ ಆತ್ಮಹತ್ಯೆಯ ಎಚ್ಚರಿಕೆ ನೀಡಿದ ಅಭಿಮಾನಿ!

Webdunia
ಮಂಗಳವಾರ, 10 ಮಾರ್ಚ್ 2020 (09:28 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರವಾಹಿ ಹೊಸ ಸೆನ್ಷೇಷನ್ ಹುಟ್ಟಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಅಭಿಮಾನಿಯೊಬ್ಬ ನಿರ್ದೇಶಕರಿಗೆ ಫೇಸ್ ಬುಕ್ ನಲ್ಲೇ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ!


ಜೊತೆ ಜೊತೆಯಲಿ ಧಾರವಾಹಿ ಶೂಟಿಂಗ್ ಸ್ಥಳಕ್ಕೆ ನೂರಾರು ಜನ ಬರುತ್ತಿರುತ್ತಾರೆ. ಕಲಾವಿದರನ್ನು ಭೇಟಿಯಾಗಿ ಮಾತನಾಡಿಸುವುದು ಹೊಸದೇನಲ್ಲ. ಆದರೆ ನಿರ್ದೇಶಕ ಆರೂರು ಜಗದೀಶ್ ಫೇಸ್ ಬುಕ್ ನಲ್ಲಿ ಪ್ರಕಟಿಸಿರುವ ವಿಡಿಯೋ ಒಂದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿ ನಿಮ್ಮ ತಂಡವನ್ನು ನನ್ನ ಜನ್ಮದಿನದಂದು ಭೇಟಿ ಮಾಡಲು ಅವಕಾಶ ಕೊಡದಿದ್ದರೆ ಅಂದೇ ನನ್ನ ಕೊನೆಯ ದಿನವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾನೆ.

ಈ ವ್ಯಕ್ತಿಯ ಹುಚ್ಚು ಅಭಿಮಾನಕ್ಕೆ ಬೆಚ್ಚಿದ ನಿರ್ದೇಶಕ ಆರೂರು ಜಗದೀಶ್, ಹಾಗೆಲ್ಲಾ ಮಾಡಬೇಡಿ, ಖಂಡಿತಾ ಬನ್ನಿ ಭೇಟಿ ಮಾಡಿ ಎಂದಿದ್ದಾರೆ. ಅಷ್ಟೇ ಅಲ್ಲ, ಆತ ನೀಡಿದ ಫೋನ್ ನಂಬರ್ ಗೆ ನಮ್ಮ ತಂಡದವರೇ ಕರೆ ಮಾಡಿ ಕರೆಸುತ್ತಾರೆ ಎಂದು ಭರವಸೆ ಕೊಟ್ಟಿದ್ದಾರೆ! ಧಾರವಾಹಿಗೂ ಈ ಮಟ್ಟಿಗೆ ಹುಚ್ಚು ಅಭಿಮಾನ ಬೆಳೆಸಿಕೊಂಡವರ ಬಗ್ಗೆ ಏನನ್ನಬೇಕು?

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments