ಜೊತೆ ಜೊತೆಯಲಿ ಧಾರವಾಹಿ ನಿರ್ದೇಶಕರಿಗೆ ಆತ್ಮಹತ್ಯೆಯ ಎಚ್ಚರಿಕೆ ನೀಡಿದ ಅಭಿಮಾನಿ!

Webdunia
ಮಂಗಳವಾರ, 10 ಮಾರ್ಚ್ 2020 (09:28 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರವಾಹಿ ಹೊಸ ಸೆನ್ಷೇಷನ್ ಹುಟ್ಟಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಅಭಿಮಾನಿಯೊಬ್ಬ ನಿರ್ದೇಶಕರಿಗೆ ಫೇಸ್ ಬುಕ್ ನಲ್ಲೇ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ!


ಜೊತೆ ಜೊತೆಯಲಿ ಧಾರವಾಹಿ ಶೂಟಿಂಗ್ ಸ್ಥಳಕ್ಕೆ ನೂರಾರು ಜನ ಬರುತ್ತಿರುತ್ತಾರೆ. ಕಲಾವಿದರನ್ನು ಭೇಟಿಯಾಗಿ ಮಾತನಾಡಿಸುವುದು ಹೊಸದೇನಲ್ಲ. ಆದರೆ ನಿರ್ದೇಶಕ ಆರೂರು ಜಗದೀಶ್ ಫೇಸ್ ಬುಕ್ ನಲ್ಲಿ ಪ್ರಕಟಿಸಿರುವ ವಿಡಿಯೋ ಒಂದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿ ನಿಮ್ಮ ತಂಡವನ್ನು ನನ್ನ ಜನ್ಮದಿನದಂದು ಭೇಟಿ ಮಾಡಲು ಅವಕಾಶ ಕೊಡದಿದ್ದರೆ ಅಂದೇ ನನ್ನ ಕೊನೆಯ ದಿನವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾನೆ.

ಈ ವ್ಯಕ್ತಿಯ ಹುಚ್ಚು ಅಭಿಮಾನಕ್ಕೆ ಬೆಚ್ಚಿದ ನಿರ್ದೇಶಕ ಆರೂರು ಜಗದೀಶ್, ಹಾಗೆಲ್ಲಾ ಮಾಡಬೇಡಿ, ಖಂಡಿತಾ ಬನ್ನಿ ಭೇಟಿ ಮಾಡಿ ಎಂದಿದ್ದಾರೆ. ಅಷ್ಟೇ ಅಲ್ಲ, ಆತ ನೀಡಿದ ಫೋನ್ ನಂಬರ್ ಗೆ ನಮ್ಮ ತಂಡದವರೇ ಕರೆ ಮಾಡಿ ಕರೆಸುತ್ತಾರೆ ಎಂದು ಭರವಸೆ ಕೊಟ್ಟಿದ್ದಾರೆ! ಧಾರವಾಹಿಗೂ ಈ ಮಟ್ಟಿಗೆ ಹುಚ್ಚು ಅಭಿಮಾನ ಬೆಳೆಸಿಕೊಂಡವರ ಬಗ್ಗೆ ಏನನ್ನಬೇಕು?

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments