ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

Krishnaveni K
ಗುರುವಾರ, 23 ಅಕ್ಟೋಬರ್ 2025 (10:46 IST)

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಕಾಮಿಡಿ ಕಿಲಾಡಿಗಳು ಸೀಸನ್ 5 ರ ಪ್ರೋಮೋ ಹರಿಯಬಿಡಲಾಗಿದೆ. ಆದರೆ ಇದನ್ನು ನೋಡಿದ ನೆಟ್ಟಿಗರು ಗರಂ ಆಗಿದ್ದಾರೆ. ಇದಕ್ಕೆ ಕಾರಣವೂ ಇದೆ.

ಜೀ ಕನ್ನಡದಲ್ಲಿ ಈಗಾಗಲೇ ಯಶಸ್ವಿಯಾಗಿ ನಾಲ್ಕು ಸೀಸನ್ ಗಳನ್ನು ಮುಗಿಸಿರುವ ಕಾಮಿಡಿ ಕಿಲಾಡಿಗಳು ಈಗ ಐದನೇ ಸೀಸನ್ ಗೆ ಕಾಲಿಡುತ್ತಿದೆ. ಇದರ ಎರಡನೇ ಪ್ರೋಮೋವನ್ನು ವಾಹಿನಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ.

ಮೊದಲ ಪ್ರೋಮೋ ಬಿಟ್ಟಾಗಲೇ ಈ ಬಾರಿ ನಿರೂಪಕರಾಗಿ ಎಂದಿನಂತೆ ಮಾಸ್ಟರ್ ಆನಂದ್ ಇಲ್ಲ ಎಂದು ಅಭಿಮಾನಿಗಳು ಸಿಟ್ಟಾಗಿದ್ದರು. ಇದೀಗ ಎರಡನೇ ಪ್ರೋಮೋ ನೋಡಿ ಮತ್ತಷ್ಟು ಬೇಸರಗೊಂಡಿದ್ದಾರೆ. ಈ ಬಾರಿ ತೀರ್ಪುಗಾರರಾಗಿ ಎಂದಿನಂತೆ ನವರಸನಾಯಕ ಜಗ್ಗೇಶ್ ಇದ್ದಾರೆ. ಯೋಗರಾಜ್ ಭಟ್ ಕಮ್ ಬ್ಯಾಕ್ ಮಾಡಿದ್ದಾರೆ. ಅವರ ಜೊತೆಗೆ ಅಚ್ಚರಿಯೆಂಬಂತೆ ರಕ್ಷಿತಾ ಸ್ಥಾನದಲ್ಲಿ ಹಿರಿಯ ನಟಿ ತಾರಾ ಅನುರಾಧ ಇದ್ದಾರೆ.

ಮಾಸ್ಟರ್ ಆನಂದ್ ರಂತೆ ರಕ್ಷಿತಾ ಪ್ರೇಮ್ ರನ್ನೂ ಕಾಮಿಡಿ ಕಿಲಾಡಿಗಳು ಪ್ರೇಕ್ಷಕರು ಒಪ್ಪಿಕೊಂಡುಬಿಟ್ಟಿದ್ದರು. ಇದೀಗ ಆನಂದ್ ಇಲ್ಲ, ರಕ್ಷಿತಾ ಕೂಡಾ ಇಲ್ಲ ಎಂದು ನೆಟ್ಟಿಗರು ಗರಂ ಆಗಿ ಕಾಮೆಂಟ್ ಮಾಡಿದ್ದಾರೆ. ತಾರಾ ಅವರ ಬಗ್ಗೆ ನಮಗೆ ಆಕ್ಷೇಪವಿಲ್ಲ. ಆದರೆ ನಿರೂಪಕರಾಗಿ ಆನಂದ್, ತೀರ್ಪುಗಾರರಾಗಿ ರಕ್ಷಿತಾ ಇದ್ದರೇನೇ ಶೋಗೊಂದು ಕಳೆ. ಅವರಿಬ್ಬರನ್ನೂ ಯಾಕೆ ಹೊರಗಿಟ್ಟಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments