Webdunia - Bharat's app for daily news and videos

Install App

ಚಾನೆಲ್ ವಿರುದ್ಧ ಸಿಡಿದೆದ್ದ ಆರತಿಗೊಬ್ಬ ಧಾರವಾಹಿ ಹೀರೋ ತೇಜಸ್

Webdunia
ಸೋಮವಾರ, 8 ಜೂನ್ 2020 (09:13 IST)
ಬೆಂಗಳೂರು: ಕನ್ನಡ ಕಿರುತೆರೆಯನ್ನು ಲಾಕ್ ಡೌನ್ ಬಳಿಕ ಡಬ್ಬಿಂಗ್ ಧಾರವಾಹಿಗಳು ಆಕ್ರಮಿಸಿಕೊಳ್ಳುತ್ತಿವೆ. ಇದರ ಪರಿಣಾಮ ಟಿಆರ್ ಪಿ ಇಲ್ಲದ ಕನ್ನಡ ಧಾರವಾಹಿಗಳು ಒಂದೊಂದಾಗಿ ಪ್ರಸಾರ ನಿಲ್ಲಿಸುತ್ತಿವೆ.


ಅದರಲ್ಲೂ ಸುವರ್ಣ ವಾಹಿನಿಯಂತೂ ತನ್ನ ಬಹುತೇಕ ಧಾರವಾಹಿಗಳನ್ನು ಇದ್ದಕ್ಕಿದ್ದಂತೆ ನಿಲ್ಲಿಸಿ ಡಬ್ಬಿಂಗ್ ಧಾರವಾಹಿಗಳಿಗೆ ಅನುವು ಮಾಡಿಕೊಟ್ಟಿದೆ. ಇದರ ವಿರುದ್ಧ ಈಗ ಇದೇ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಆರತಿಗೊಬ್ಬ, ಕೀರುತಿಗೊಬ್ಬ ಧಾರವಾಹಿಯ ನಾಯಕ ತೇಜಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾನೆಲ್ ವಿರುದ್ಧ ಬಹಿರಂಗ ಕಿಡಿ ಕಾರಿರುವ ತೇಜಸ್ ನಮಗೆ ಇದರ ಬಗ್ಗೆ ಮಾಹಿತಿಯೂ ಇರಲಿಲ್ಲ. ಡಬ್ಬಿಂಗ್ ಧಾರವಾಹಿಗಳಿಗೆ ಅನುವು ಮಾಡಿಕೊಡಲು ಕನ್ನಡದ ಧಾರವಾಹಿಗಳನ್ನು ನಿಲ್ಲಿಸಲಾಗುತ್ತಿದೆ. ನಾವು ಲಾಕ್ ಡೌನ್ ಬಳಿಕ ಶೂಟಿಂಗ್ ಗೆ ಸಿದ್ಧರಾಗಿದ್ದೆವು. ಆದರೆ ಈಗ ಚಾನೆಲ್ ಏಕಾಏಕಿ ಧಾರವಾಹಿ ನಿಲ್ಲಿಸಲು ಸೂಚಿಸಿದೆ. ಡಬ್ಬಿಂಗ್ ಧಾರವಾಹಿ ವೀಕ್ಷಿಸುವ ಪ್ರೇಕ್ಷಕರು ಒಂದು ವಿಷಯವನ್ನು ಅರ್ಥ ಮಾಡಿಕೊಳ್ಳಬೇಕು. ಕನ್ನಡ ಧಾರವಾಹಿಗಳನ್ನು ನಿರ್ಲಕ್ಷಿಸಿ ಬೇರೆ ಧಾರವಾಹಿಯನ್ನು ನೋಡುವುದರಿಂದ ಕನ್ನಡದ ಎಷ್ಟೋ ಕಲಾವಿದರು, ತಾಂತ್ರಿಕ ಕೆಲಸಗಾರರಿಗೆ ಕೆಲಸವಿಲ್ಲದೇ ಆಗುತ್ತದೆ. ಕನ್ನಡ ಕಿರುತೆರೆಯಲ್ಲಿ ಒಗ್ಗಟ್ಟೇ ಇಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments