Webdunia - Bharat's app for daily news and videos

Install App

ರಾಧಾ ರಮಣ ನಟ ಸುಶೀಲ್ ಗೌಡ ಆತ್ಮಹತ್ಯೆ ಬಗ್ಗೆ ಕಿರುತೆರೆ ನಟರು ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 9 ಜುಲೈ 2020 (09:20 IST)
ಬೆಂಗಳೂರು: ಮೊನ್ನೆಯಷ್ಟೇ ಬಾಲಿವುಡ್ ನ ಉದಯೋನ್ಮುಖ ಪ್ರತಿಭೆ ಸುಶಾಂತ್ ಸಿಂಗ್ ರಜಪೂತ್ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಭಾರೀ ಸುದ್ದಿಯಾಗಿತ್ತು.


ಅದೇ ರೀತಿಯ ಘಟನೆ ಇದೀಗ ಕನ್ನಡ ಕಿರುತೆರೆಯಲ್ಲೂ ನಡೆದಿದೆ. ಮಾನಸಿಕ ಖಿನ್ನೆತೆಯಿಂದ ಬಳಲುತ್ತಿದ್ದ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಬಂದಿದೆ.

ರಾಧಾರಮಣ ಧಾರವಾಹಿಯ ಆರಂಭದ ಎಪಿಸೋಡ್ ನೋಡಿದವರಿಗೆ ಈ ನಟನ ಪರಿಚಯ ಚೆನ್ನಾಗಿರುತ್ತದೆ. ರಾಧಾ ಟೀಚರ್ ನ ಮದುವೆಯಾಗುವ ‘ಸಾಗರ್’ ಎನ್ನುವ ಪಾತ್ರ ಮಾಡಿದ್ದ ಈ ನಟನ ಸಾವಿಗೆ ಕಿರುತೆರೆ ಲೋಕ ಕಂಬನಿ ಮಿಡಿದಿದೆ.

ಸುಶೀಲ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ಜಯರಾಮ್ ಕಾರ್ತಿಕ್ ‘ಏನಾಗುತ್ತಿದೆ ಈ ಜಗತ್ತಿಗೆ? ಸಮಸ್ಯೆಗಳು ಏನೇ ಇರಲಿ. ಅದನ್ನು ನಾವು ಎದುರಿಸೋಣ. ಈ ರೀತಿ ಸೋತು ಜೀವನ ಕೊನೆಗೊಳಿಸುವಂತಹ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಇದು ನಿಮ್ಮನ್ನು ನಂಬಿಕೊಂಡವರಿಗೆ ಎಷ್ಟು ನೋವು ತರುತ್ತದೆ ಎನ್ನುವುದನ್ನು ಯೋಚಿಸಿ ಎಂದು ಬರೆದುಕೊಂಡಿದ್ದಾರೆ.

ಇನ್ನು ರಾಧಾ ಖ್ಯಾತಿಯ ನಟಿ ಶ್ವೇತಾ ಪ್ರಸಾದ್ ಕೂಡಾ ಕಂಬನಿ ಮಿಡಿದಿದ್ದು, ಯಾರಾದರೂ ನಿಮ್ಮ ಫ್ರೆಂಡ್ಸ್ ಸರ್ಕಲ್ ನಲ್ಲಿ ಹಲವು ದಿನಗಳಿಂದ ಮೌನವಾಗಿದ್ದರೆ, ವ್ಯಾಟ್ಸಪ್ ಡಿಪಿ ತೆಗೆದು ಹಾಕುವುದು, ವಿಚಿತ್ರವಾಗಿ ಬರೆದುಕೊಳ್ಳುವುದು ಮಾಡಿದರೆ ಅಂತಹವರ ಬಗ್ಗೆ ಗಮನ ಕೊಡಿ. ಅವರಿಗೆ ನಾನಿದ್ದೇನೆ ಎಂದು ಭರವಸೆ ಕೊಡಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments