Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿಶೇಷತೆ ಬಹಿರಂಗಪಡಿಸಿದ ಕಿಚ್ಚ ಸುದೀಪ್

Webdunia
ಮಂಗಳವಾರ, 3 ಅಕ್ಟೋಬರ್ 2023 (18:11 IST)
Photo Courtesy: Twitter
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ಇದೇ ವಾರಂತ್ಯಕ್ಕೆ ಆರಂಭವಾಗುತ್ತಿದೆ. ಇದಕ್ಕೆ ಮೊದಲು ಕಿಚ್ಚ ಸುದೀಪ್ ಮತ್ತು ಕಲರ್ಸ್ ವಾಹಿನಿಯ ಮುಖ್ಯಸ್ಥರು ಇಂದು ಪತ್ರಿಕಾಗೋಷ್ಠಿ ನಡೆಸಿ ಈ ಬಾರಿಯ ಶೋ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದುವರೆಗೆ ಇನ್ನೋವಾ ಫಿಲಂ ಸಿಟಿಯಲ್ಲಿ ಬಿಗ್ ಬಾಸ್ ಮನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ದೊಡ್ಡ ಆಲದ ಮರ ಬಳಿಯಿರುವ ಮನೆಯೊಂದನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಮನೆ ಇತರ ಭಾಷೆಯಲ್ಲಿ ಮೂಡಿಬರುವ ಬಿಗ್ ಬಾಸ್ ಮನೆಗಳಿಗಿಂತಲೂ ದೊಡ್ಡದು ಎನ್ನಲಾಗಿದೆ.

ಈ ಬಾರಿಯೂ ಬಿಗ್ ಬಾಸ್ ಗೆದ್ದವರಿಗೆ 50 ಲಕ್ಷ ರೂ. ನೀಡಲಾಗುತ್ತದೆ. ಸ್ಪರ್ಧಿಗಳನ್ನು ಅವರ ವ್ಯಕ್ತಿತ್ವ, ಹಿನ್ನೆಲೆ, ಜನಪ್ರಿಯತೆಯನ್ನು ಪರಿಗಣಿಸಿ ಶೋಗೆ ಆಯ್ಕೆ ಮಾಡಲಾಗುತ್ತದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಈ ಬಾರಿ ಜಿಯೋ ಸಿನಿಮಾದಲ್ಲೂ ಬಿಗ್ ಬಾಸ್ ನೇರಪ್ರಸಾರ ವೀಕ್ಷಿಸಬಹುದು.

ಇನ್ನು, ಇದು ಕಿಚ್ಚ ಸುದೀಪ್ ಪಾಲಿಗೆ 10 ನೇ ಸೀಸನ್ ನ ನಿರೂಪಣೆ. ಈ ಮೂಲಕ ಯಾವ ಭಾಷೆಯ ಸ್ಟಾರ್ ನಿರೂಪಕರಿಗಿಂತ ಹೆಚ್ಚು ಬಾರಿ ಬಿಗ್ ಬಾಸ್ ನಿರೂಪಣೆ ಮಾಡಿದ ದಾಖಲೆ ಮಾಡಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿಚ್ಚ ಸುದೀಪ್ ಇದುವರೆಗೆ ನಾನು ನಿರ್ವಹಿಸಿದ ಬಿಗ್ ಬಾಸ್ ಸೀಸನ್ ಗಳ ಪೈಕಿ ಸೀಸನ್ 6 ಬಳಿಕ ಸುಸ್ತಾಗಿದ್ದೆ. ಇನ್ನು ಸಾಕು ಆಂಕರಿಂಗ್, ನನ್ನಿಂದಾಗಲ್ಲ ಎಂದುಕೊಂಡಿದ್ದೆ. ಆದರೆ ಸೀಸನ್ 7 ನನಗೆ ಹೊಸ ಹುರುಪು ಕೊಟ್ಟಿತು. ಎಲ್ಲಿಯವರೆಗೆ ನನ್ನ ಮಾತುಗಳಿಂದ ಸ್ಪರ್ಧಿಗಳ ಜನಪ್ರಿಯತೆ, ವ್ಯಕ್ತಿತ್ವಕ್ಕೆ ಧಕ್ಕೆ ಬರುವುದಿಲ್ಲವೋ ಅಲ್ಲಿಯವರೆಗೆ ನಿರೂಪಣೆ ಮಾಡುತ್ತಿರುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments