Webdunia - Bharat's app for daily news and videos

Install App

ಹಾಲು ಕದ್ದ ಕಳ್ಳಬೆಕ್ಕುಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್...

Webdunia
ಸೋಮವಾರ, 6 ನವೆಂಬರ್ 2017 (23:09 IST)
ಬೆಂಗಳೂರು: `ವಾರದ ಕತೆ ಕಿಚ್ಚನ ಜತೆ’ ಬಿಸಿ ಬಿಸಿ ಚರ್ಚೆಗೆ ಕಾರಣವಾಯ್ತು. ಹಾಲಿನ ವಿಷಯ ಸ್ವಲ್ಪ ಕೋಲಾಹಲವನ್ನೇ ಎಬ್ಬಿಸಿತು. ಇದಕ್ಕೆ ಕಿಚ್ಚ ಸುದೀಪ್ ಕೂಡ ಗರಂ ಆದರು.

ಸಮೀರ್ ಆಚಾರ್ಯಗೆ ಟೀ ಬದಲು ಹಾಲು ಸೇವಿಸಲು ಒಂದು ಲೋಟ ಹಾಲು ನೀಡಿರಲಿಲ್ಲ. ಎರಡು ದಿನಕ್ಕೆ ಮಾತ್ರ ಹಾಲಿದೆ ಎಂದು ಹಾಲು ನೀಡಲು ಚಂದ್ರು, ದಯಾಳ್‌ ಹಾಗೂ ಆಶಿತಾ ನಿರಾಕರಿಸಿದ್ರು. ಇದು ಇಷ್ಟಕ್ಕೆ ಮುಗಿಯದೆ ದೊಡ್ಡ ಚರ್ಚೆಗೆ ನಾಂದಿಯಾಡಿತು.

ಆದರೆ ಅಲ್ಲಿ ಹಾಲು ಕಡಿಮೆಯಾಗಲು ಕಾರಣವೇನು ಎಂದು ಸ್ವಲ್ಪಹೊತ್ತಲ್ಲೇ ತಿಳಿಯಿತು. ಬಿಗ್‌ ಬಾಸ್‌ ನೀಡಿದ್ದ ಹಾಲನ್ನು ನೀಡಿದ ದಿನವೇ ದಯಾಳ್‌, ಕೃಷಿ ಹಾಗೂ ಅನುಪಮಾ ಹಾಲಿನ ಪ್ಯಾಕೇಟ್‌ ಗಳನ್ನು ಮುಚ್ಚಿಟ್ಟಿದ್ದರು. ಆದರೆ ಇದು ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಜಗಳವಾದ ಬಳಿಕ ಈ ವಿಷಯ ಸಿಹಿ ಕಹಿ ಚಂದ್ರುಗೆ ತಿಳಿದಿದೆ. ದಯಾಳ್‌ ತೆಗೆದುಕೊಂಡ ಕ್ರಮ ತಪ್ಪು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದೇ ವಿಷಯವನ್ನ ಗಂಭೀರವಾಗಿ ಚರ್ಚೆಗೆ ತೆಗೆದುಕೊಂಡ ಸುದೀಪ್, ಹಾಲು ಬಚ್ಚಿಟ್ಟವರಿಗೆ ಫುಲ್ ಕ್ಲಾಸ್ ತೆಗೆದುಕೊಂಡರು. ಬೇರೆಯವರಿಗೆ ಕುಡಿಯಲು ಹಾಲು ಇಲ್ಲದ ವೇಳೆ ಹೀಗೆ ತೆಗೆದಿಡುವುದು ಸರಿಯಲ್ಲ ಎಂದರು. ಆದರೆ ದಯಾಳ್ ಮಾತ್ರ ತಾವು ಮಾಡಿದ್ದು ಸರಿ ಎಂದೇ ವಾದಿಸಿದರು. ಇನ್ನು ಮುಂದೆ ಹೀಗಾಗದಂತೆ ಎಚ್ಚೆತ್ತುಕೊಳ್ಳಿ ಎಂದು ಕಿಚ್ಚ ಸುದೀಪ್ ಬುದ್ಧಿವಾದ ಹೇಳಿದ್ರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments