Webdunia - Bharat's app for daily news and videos

Install App

ವರ್ತೂರು ಸಂತೋಷ್ ಸನ್ಮಾನ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಶಿಕ್ಷೆ

Krishnaveni K
ಶನಿವಾರ, 10 ಫೆಬ್ರವರಿ 2024 (16:33 IST)
Photo Courtesy: facebook
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿ ವರ್ತೂರು ಸಂತೋಷ್ ಗೆ ಸನ್ಮಾನ ಮಾಡಿದ ಕಾರಣಕ್ಕೆ ಪೊಲೀಸ್ ಅಧಿಕಾರಿಯೊಬ್ಬರಿಗೆ ವರ್ಗಾವಣೆ ಶಿಕ್ಷೆ ದೊರೆತಿದೆ.

ಬಿಗ್ ಬಾಸ್ ಶೋನಿಂದ ಜನಪ್ರಿಯರಾದ ವರ್ತೂರು ಸಂತೋಷ್ ಗೆ ಎಲ್ಲೇ ಹೋದರೂ ಜನ ಸನ್ಮಾನ ಮಾಡುತ್ತಿದ್ದಾರೆ. ಅವರೊಂದಿಗೆ ಸೆಲ್ಫೀಗಾಗಿ ಮುಗಿಬೀಳುತ್ತಿದ್ದಾರೆ. ಒಟ್ಟಾರೆಯಾಗಿ ಎಲ್ಲೋ ಮೂಲೆಯಲ್ಲಿ ಕೃಷಿಕನಾಗಿ ಕೆಲವೊಂದು ಜನಕ್ಕೆ ಮಾತ್ರ ಚಿರಪರಿಚಿತರಾಗಿದ್ದ ವರ್ತೂರು ಈಗ ರಾಜ್ಯಾದ್ಯಂತ ಮನೆ ಮಾತಾಗಿದ್ದಾರೆ.

ಪೊಲೀಸ್ ಅಧಿಕಾರಿ ಟ್ರಾನ್ಸ್ ಫರ್
ಇನ್ನು, ಪಿಎಸ್ ಐ ತಿಮ್ಮರಾಯಪ್ಪ ಎಂಬವರು ವರ್ತೂರು ಸಂತೋಷ್ ಗೆ ಸಮವಸ್ತ್ರ ಧರಿಸಿರುವಾಗಲೇ ಶಾಲು ಹಾಕಿ ಪೇಟ ಧರಿಸಿ ಸನ್ಮಾನ ಮಾಡಿದ್ದರು. ಅವರ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ವರ್ಗಾವಣೆಯ ಶಿಕ್ಷೆ ನೀಡಿದ್ದಾರೆ.

ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ವರ್ತೂರು ಸಂತೋಷ್ ಆರೋಪಿಯಾಗಿದ್ದಾರೆ. ಬಿಗ್ ಬಾಸ್ ಮನೆಯಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಬಳಿಕ ಜಾಮೀನು ಪಡೆದು ಮರಳಿ ಬಿಗ್ ಬಾಸ್ ಮನೆಗೆ ಹೋಗಿದ್ದರು. ಇದೀಗ ಅದೇ ವರ್ತೂರುಗೆ ಸನ್ಮಾನ ಮಾಡಿದ್ದಕ್ಕೆ ಅದೂ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಸನ್ಮಾನ ಮಾಡಿದ್ದಕ್ಕೆ ಅಧಿಕಾರಿಗೆ ಶಿಕ್ಷೆ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments