Webdunia - Bharat's app for daily news and videos

Install App

ದೇವೇಗೌಡರನ್ನು ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್

Webdunia
ಸೋಮವಾರ, 20 ಫೆಬ್ರವರಿ 2017 (11:41 IST)
ಕಲರ್ಸ್ ಕನ್ನಡ ವಾಹಿನಿಯ ’ಬಿಗ್ ಬಾಸ್ ಸೀಸನ್ 4’ ವಿನ್ನರ್ ’ಒಳ್ಳೆ ಹುಡುಗ’ ಪ್ರಥಮ್ ಇತ್ತೀಚೆಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದಾರೆ. ಬಿಗ್ ಬಾಸ್ ಮನೆ ಸೇರುವುದಕ್ಕೂ ಮುನ್ನ ದೇವೇಗೌಡರ ಆಶೀರ್ವಾದ ಪಡೆದು ಮನೆಗೆ ಪ್ರವೇಶಿಸಿದ್ದರು ಪ್ರಥಮ್.
 
ಈಗ ವಿನ್ ಆದ ಮೇಲೂ ಪದ್ಮನಾಭನಗರದ ಅವರ ಮನೆಗೆ ಭೇಟಿ ನೀಡಿ ದೇವೇಗೌಡ ಮತ್ತವರ ಪತ್ನಿ ಚೆನ್ನಮ್ಮ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೇವಲ ಆಶೀರ್ವಾದ ಅಷ್ಟೇ ಅಲ್ಲದೆ ದೇವೇಗೌಡರ ಜತೆಗೆ ಊಟವನ್ನೂ ಮಾಡಿದ್ದಾರೆ. 
 
ಬಿಗ್ ಬಾಸ್ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಅದರಲ್ಲಿ ಬಂದ ಬಹುಮಾನದ ಹಣವನ್ನು ಕಷ್ಟದಲ್ಲಿರುವವರಿಗೆ, ರೈತರಿಗೆ, ಯೋಧರಿಗೆ ಕೊಡುವುದಾಗಿ ಘೋಷಿಸಿದ್ದರು ಪ್ರಥಮ್. ಅದರಂತೆ ಈಗಾಗಲೆ ರೂ.50,000 ಯೋಧರ ಕುಟುಂಬಕ್ಕೆ ನೀಡಿದ್ದಾರೆ. ಈಗಾಗಲೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಅವರನ್ನೂ ಭೇಟಿಯಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments