Webdunia - Bharat's app for daily news and videos

Install App

ಇನ್ನೆಂದೂ ಪಾಕ್ ಕಲಾವಿದರನ್ನು ಬಳಸುವುದಿಲ್ಲ ಎಂದ ನಿರ್ಮಾಪಕರು

Webdunia
ಭಾನುವಾರ, 23 ಅಕ್ಟೋಬರ್ 2016 (08:48 IST)
ಮುಂಬೈ: ಇನ್ನೆಂದೂ ಬಾಲಿವುಡ್  ಸಿನಿಮಾಗಳಲ್ಲಿ ಪಾಕಿಸ್ತಾನ ಮೂಲದ ಕಲಾವಿದರನ್ನು ಬಳಸುವುದಿಲ್ಲ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಮುಖೇಶ್ ಭಟ್ ಹೇಳಿದ್ದಾರೆ.

ನಿರ್ಮಾಪಕರು, ಎಂಎನ್ಎಸ್ ಕಾರ್ಯಕರ್ತರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ನಡುವೆ ನಡೆದ ಸಂಧಾನ ಸಭೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಕರಣ್ ಜೋಹರ್ ನಿರ್ಮಾಣದ “ಏ ದಿಲ್ ಹೇ ಮುಷ್ಕಿಲ್” ಚಿತ್ರದಲ್ಲಿ ಪಾಕ್ ಕಲಾವಿದನನ್ನು ಬಳಸಿಕೊಂಡಿದ್ದಕ್ಕೆ ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆಯ ಬೆದರಿಕೆ ಹಾಕಿದ್ದರು.

ಹೀಗಾಗಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ನಿರ್ಮಾಪಕರು ಸಂಧಾನ ಸಭೆ ನಡೆಸಿದ್ದರು.  ಏ ದಿಲ್ ಹೇ ಮುಷ್ಕಿಲ್ ಚಿತ್ರ ಪ್ರದರ್ಶನದ ಮೊದಲು ಉರಿ ದಾಳಿಯಲ್ಲಿ ಮೃತರಾದ ಉಗ್ರರಿಗೆ ಗೌರವ ನಮನ ಸಲ್ಲಿಸಲಾಗುವುದು. ದಾಳಿಯಲ್ಲಿ ಮೃತರಾದ ಸೈನಿಕರ ಕುಟುಂಬಕ್ಕೆ ಸಹಾಯ ಮಾಡುವುದಾಗಿಯೂ ನಿರ್ಮಾಪಕರು ಭರವಸೆಯಿತ್ತರು.

ಈ ಆಶ್ವಾಸನೆಗಳ ನಂತರ ಕೊಂಚ ಮೆತ್ತಗಾದ ಎಂಎನ್ಎಸ್ ಕಾರ್ಯಕರ್ತರು ಚಿತ್ರ ಬಿಡುಗಡೆಗೆ ಅಡ್ಡಿ ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ದೀಪಾವಳಿ ಸಂದರ್ಭ ಚಿತ್ರ ನಿರಾಂತಕವಾಗಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments