ಟಾರ್ಚ್ ಹಿಡ್ಕೊಂಡು ದಟ್ಟ ಕಾಡಲ್ಲಿ ಚಾರು: ಸಿಕ್ಕಾಪಟ್ಟೆ ಟ್ರೋಲ್ ಆದ ರಾಮಚಾರಿ ಸೀರಿಯಲ್

Krishnaveni K
ಬುಧವಾರ, 27 ಮಾರ್ಚ್ 2024 (09:49 IST)
Photo Courtesy: Instagram
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಾಮಚಾರಿ ಧಾರವಾಹಿ ಈಗ ಸಿಕ್ಕಾಪಟ್ಟೆ ಟ್ರೋಲ್ ಆಗಿದೆ. ಅದಕ್ಕೆ ಕಾರಣ ಇದೀಗ ನಡೆಯುತ್ತಿರುವ ಎಪಿಸೋಡ್ ನಲ್ಲಿ ನಾಯಕಿ ಮಾಡುತ್ತಿರುವ ‘ಸಾಹಸ’ಗಳು.

ಖ್ಯಾತ ನಿರ್ದೇಶಕ, ನಿರ್ಮಾಪಕ ರಾಮ್ ಜಿಯವರ ಧಾರವಾಹಿಯಲ್ಲಿ ಈಗ ಕಥಾನಾಯಕ ರಾಮಚಾರಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಆಶ್ರಮದಲ್ಲಿ ಗುರೂಜಿಯೊಬ್ಬರು ಆತನಿಗೆ ಚಿಕಿತ್ಸೆ ಮಾಡುತ್ತಿದ್ದಾರೆ. ಹಾಗಿದ್ದರೂ ಆತ ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ಆತನ ತರಬೇಕು ಎಂದು ಆದೇಶಿಸುತ್ತಾರೆ. ಆದರೆ ದಟ್ಟ ಕಾಡಿನಲ್ಲಿ, ಕಾಡು ಪ್ರಾಣಿಗಳಿರುವ ಕಡೆ ರಾತ್ರಿ ಸಂಚಾರ ಮಾಡಿ ಜ್ಯೋತಿ ತರುವುದು ಅಷ್ಟು ಸುಲಭವಲ್ಲ ಎನ್ನುತ್ತಾರೆ.

ಹಾಗಿದ್ದರೂ ಗಂಡನ ರಾಮಚಾರಿ ಪತ್ನಿ, ಕಥಾನಾಯಕಿ ಚಾರುಲತಾ ದಟ್ಟ ಕಾಡಿನಲ್ಲಿ ಟಾರ್ಚ್ ಹಿಡಿದುಕೊಂಡು ರಾತ್ರಿ ವೇಳೆ ಸಂಚಾರ ಆರಂಭಿಸುತ್ತಾಳೆ. ಚಾರು ಪಾತ್ರಧಾರಿಯ ಈ ಅವತಾರ ನೋಡಿ ನೆಟ್ಟಿಗರು ಈ ಹಿಂದೆ ಇದೇ ರಾಮ್ ಜಿ ನಿರ್ದೇಶನದಲ್ಲಿ ಮೂಡಿಬಂದ ಪುಟ್ಟಗೌರಿ ಧಾರವಾಹಿಯಲ್ಲಿ ಕಥಾನಾಯಕಿಯ ಇದೇ ರೀತಿಯ ಸಾಹಸಗಳನ್ನು ಮಾಡಿದ್ದನ್ನು ನೆನೆಸಿಕೊಂಡಿದ್ದಾರೆ.

ರಾಮ್ ಜಿ ಧಾರವಾಹಿಗಳೆಂದರೆ ಇಂತಹ ಹೈಪ್ ಗಳೆಲ್ಲಾ ಕಾಮನ್. ಸತ್ತವರು ಎದ್ದು ಬರೋದು, ಬದುಕಿದ್ದವರು ಸಾಯೋದು ಎಲ್ಲಾ ಕಾಮನ್. ಜೊತೆಗೆ ನಾಯಕಿ ಈಗ ದಟ್ಟಾರಣ್ಯದಲ್ಲಿ ಕಾಡು ಪ್ರಾಣಿಗಳ ಜೊತೆ ಹೋರಾಡುವ ದೃಶ್ಯವೂ ಇರಬಹುದು ಎಂದು ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗೌರಿ ಜತೆ ಮೂರನೇ ಮದುವೆಗೆ ರೆಡಿಯಾದ ಅಮೀರ್ ಖಾನ್‌ಗೆ ಮಕ್ಕಳೇ ಎಲ್ಲವನ್ನೂ ಪ್ಲಾನ್‌ ಮಾಡುತ್ತಿರುವುದಂತೆ

Video ಛತ್ರಿ ಹಿಡಿಯೋದೇನು ಬೇಕಿಲ್ಲ.. ನಟ ಕಾಜಲ್ ಅಗರ್ವಾಲ್ ವರ್ತನೆಗೆ ನೆಟ್ಟಿಗರು ಫಿದಾ

ದರ್ಶನ್ ನೆನೆದು ಇನ್‌ಸ್ಟಾದಲ್ಲಿ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

ಮಗನಿಗೂ ತನ್ನದೇ ಹಾದಿ ತೋರಿಸಿದ ರಿಷಬ್ ಶೆಟ್ಟಿ: ಮೊದಲ ಬಾರಿಗೆ ಬಣ್ಣ ಹಚ್ಚಿದ ರನ್ವಿತ್ Video

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮುಂದಿನ ಸುದ್ದಿ
Show comments