ಗುಪ್ತಚರ ಇಲಾಖೆ ಎಚ್ಚರಿಕೆಯ ಬಳಿಕ ಸರಿಗಮಪ ಶೋ ಫೈನಲ್ ಶೂಟಿಂಗ್ ರದ್ದು

Krishnaveni K
ಶನಿವಾರ, 9 ಮಾರ್ಚ್ 2024 (10:10 IST)
Photo Courtesy: Instagram
ಬೆಂಗಳೂರು: ಯಾದಗಿರಿಯಲ್ಲಿ ನಡೆಯಬೇಕಿದ್ದ ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಗ್ರ್ಯಾಂಡ್ ಫಿನಾಲೆ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು. ಇದಕ್ಕೀಗ ನಾನಾ ಕಾಣಗಳು ಕೇಳಿಬಂದಿದೆ.

ಯಾದಗಿರಿಯಲ್ಲಿ ಮೊನ್ನೆ ನಡೆಯಬೇಕಿದ್ದ ಹಾಡಿನ ರಿಯಾಲಿಟಿ ಶೋ ಫೈನಲ್ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರಿದ್ದರು. ಜೊತೆಗೆ ಅತಿಥಿಯಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಮಿಸುವವರಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿರುವುದಾಗಿ ಜೀ ವಾಹಿನಿ ಪ್ರತಿನಿಧಿಗಳು ವೇದಿಕೆಯಲ್ಲಿ ಘೋಷಿಸಿದರು.

ಇದನ್ನು ಕೇಳಿ ಅಲ್ಲಿ ನೆರೆದಿದ್ದ ಸಾವಿರಾರು ಜನ ಹಿಡಿಶಾಪ ಹಾಕುತ್ತಾ ಅಲ್ಲಿಂದ ತೆರಳಿದರು. ಆದರೆ ಇದಕ್ಕೆ ಬಾಂಬ್ ಭಯವೇ ಕಾರಣ ಎಂಬ ಗುಸು ಗುಸು ಕೇಳಿಬಂದಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಸ್ಪೋಟ ನಡೆದಿದೆ. ಇದರ ಬೆನ್ನಲ್ಲೇ ಈಮೇಲ್ ಮೂಲಕವೂ ಬಾಂಬ್ ಬೆದರಿಕೆ ಬಂದಿತ್ತು.

ಇದರ ಬೆನ್ನಲ್ಲೇ ಗುಪ್ತಚರ ಇಲಾಖೆಯಿಂದ ಇಷ್ಟೊಂದು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡದಂತೆ ಸೂಚನೆ ಬಂದ ಹಿನ್ನಲೆಯಲ್ಲೇ ಕಾರ್ಯಕ್ರಮ ರದ್ದುಗೊಳಿಸಲಾಯಿತು ಎಂದು ಕೇಳಿಬಂದಿದೆ. ಆದರೆ ಇದನ್ನು ವಾಹಿನಿ ಅಧಿಕೃತವಾಗಿ ಹೇಳಿಲ್ಲ. ಕೇವಲ ತಾಂತ್ರಿಕ ಕಾರಣ ಎಂದಷ್ಟೇ ಹೇಳಿತ್ತು. ಆದರೆ ಫೈನಲ್ ನೋಡಲು ಬಂದಿದ್ದ ಅಷ್ಟೊಂದು ಜನ ಕೊನೆಗೂ ಕಾರ್ಯಕ್ರಮ ನೋಡಲಾಗದೇ ಹಿಂತಿರುಗುವಂತಾಗಿದ್ದಕ್ಕೆ ಅಸಮಾಧಾನಗೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments