Webdunia - Bharat's app for daily news and videos

Install App

ಗುಪ್ತಚರ ಇಲಾಖೆ ಎಚ್ಚರಿಕೆಯ ಬಳಿಕ ಸರಿಗಮಪ ಶೋ ಫೈನಲ್ ಶೂಟಿಂಗ್ ರದ್ದು

Krishnaveni K
ಶನಿವಾರ, 9 ಮಾರ್ಚ್ 2024 (10:10 IST)
Photo Courtesy: Instagram
ಬೆಂಗಳೂರು: ಯಾದಗಿರಿಯಲ್ಲಿ ನಡೆಯಬೇಕಿದ್ದ ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಗ್ರ್ಯಾಂಡ್ ಫಿನಾಲೆ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು. ಇದಕ್ಕೀಗ ನಾನಾ ಕಾಣಗಳು ಕೇಳಿಬಂದಿದೆ.

ಯಾದಗಿರಿಯಲ್ಲಿ ಮೊನ್ನೆ ನಡೆಯಬೇಕಿದ್ದ ಹಾಡಿನ ರಿಯಾಲಿಟಿ ಶೋ ಫೈನಲ್ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರಿದ್ದರು. ಜೊತೆಗೆ ಅತಿಥಿಯಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಮಿಸುವವರಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿರುವುದಾಗಿ ಜೀ ವಾಹಿನಿ ಪ್ರತಿನಿಧಿಗಳು ವೇದಿಕೆಯಲ್ಲಿ ಘೋಷಿಸಿದರು.

ಇದನ್ನು ಕೇಳಿ ಅಲ್ಲಿ ನೆರೆದಿದ್ದ ಸಾವಿರಾರು ಜನ ಹಿಡಿಶಾಪ ಹಾಕುತ್ತಾ ಅಲ್ಲಿಂದ ತೆರಳಿದರು. ಆದರೆ ಇದಕ್ಕೆ ಬಾಂಬ್ ಭಯವೇ ಕಾರಣ ಎಂಬ ಗುಸು ಗುಸು ಕೇಳಿಬಂದಿದೆ. ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಸ್ಪೋಟ ನಡೆದಿದೆ. ಇದರ ಬೆನ್ನಲ್ಲೇ ಈಮೇಲ್ ಮೂಲಕವೂ ಬಾಂಬ್ ಬೆದರಿಕೆ ಬಂದಿತ್ತು.

ಇದರ ಬೆನ್ನಲ್ಲೇ ಗುಪ್ತಚರ ಇಲಾಖೆಯಿಂದ ಇಷ್ಟೊಂದು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡದಂತೆ ಸೂಚನೆ ಬಂದ ಹಿನ್ನಲೆಯಲ್ಲೇ ಕಾರ್ಯಕ್ರಮ ರದ್ದುಗೊಳಿಸಲಾಯಿತು ಎಂದು ಕೇಳಿಬಂದಿದೆ. ಆದರೆ ಇದನ್ನು ವಾಹಿನಿ ಅಧಿಕೃತವಾಗಿ ಹೇಳಿಲ್ಲ. ಕೇವಲ ತಾಂತ್ರಿಕ ಕಾರಣ ಎಂದಷ್ಟೇ ಹೇಳಿತ್ತು. ಆದರೆ ಫೈನಲ್ ನೋಡಲು ಬಂದಿದ್ದ ಅಷ್ಟೊಂದು ಜನ ಕೊನೆಗೂ ಕಾರ್ಯಕ್ರಮ ನೋಡಲಾಗದೇ ಹಿಂತಿರುಗುವಂತಾಗಿದ್ದಕ್ಕೆ ಅಸಮಾಧಾನಗೊಂಡರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments