Webdunia - Bharat's app for daily news and videos

Install App

ಸುದೀಪ್ ನಿರ್ಮಾಣದ ಧಾರಾವಾಹಿಗೆ ಅದ್ಭುತ ಪ್ರತಿಕ್ರಿಯೆ

Webdunia
ಮಂಗಳವಾರ, 31 ಜನವರಿ 2017 (13:01 IST)
ಹಲವಾರು ಜನಪ್ರಿಯ ಧಾರಾವಾಹಿಗಳು ಹಾಗೂ ರಿಯಾಲಿಟಿ ಷೋಗಳ ಮೂಲಕ ಕಿರುತೆರೆ ವೀಕ್ಷಕರ ಮನೆಮಾತಾಗಿರುವ ಜೀ ಕನ್ನಡ ವಾಹಿನಿ ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ವಾರಸ್ದಾರ ಎಂಬ ವಿನೂತನ ಧಾರಾವಾಹಿಯನ್ನು ಆರಂಭಿಸಿತ್ತು. 
 
ಒಂದು ತಿಂಗಳ ಅವಧಿಯಲ್ಲೇ ಅಪಾರ ಸಂಖ್ಯೆಯಲ್ಲಿ ವೀಕ್ಷಕ ಬಳಗವನ್ನು ಸಂಪಾದಿಸಿದ ಈ ಧಾರಾವಾಹಿಯಲ್ಲಿ ಇದೀಗ ಮಹತ್ತರ ಪಾತ್ರವೊಂದರ ಎಂಟ್ರಿಯಾಗುತ್ತಿದೆ. ಅದೂ ಬೇರಾರೂ ಅಲ್ಲ ಡ್ರಾಮಾ ಜೂನಿಯರ್ಸ್ ಖ್ಯಾತಿಯ ಪುಟ್ಟ ಮಗು ಚಿತ್ರಾಲಿ.  
 
ಶಿವಪುರ ಎಂಬ ಪುಟ್ಟಗ್ರಾಮದಲ್ಲಿ ನಡೆದಂಥ ಕಥೆ ಇದಾಗಿದ್ದು ಅಲ್ಲಿನ 2 ಮನೆತನಗಳ ಕಥೆಯನ್ನು ಈ ಧಾರಾವಾಹಿ ಹೇಳಲಿದೆ.  ಅದರಲ್ಲಿ ಸಿಂಹವಂಶದ ಕುಟುಂಬದಲ್ಲಿ ನಡೆಯುವ ಹಲವಾರು ಘಟನೆಗಳನ್ನು ಇಟ್ಟುಕೊಂಡು ಈ ಧಾರಾವಾಹಿಯನ್ನು ರೂಪಿಸಲಾಗಿದೆ. ಸಿಂಹವಂಶದ ಸೊಸೆಯಾದ ಭವಾನಿ ತಾನು ಹೆತ್ತ ಹೆಣ್ಣುಮಗುವನ್ನು ಉಳಿಸಿಕೊಳ್ಳಲು ಹೋರಾಡುವುದೇ ವಾರಸ್ದಾರ ಕಥೆಯ ಮುಖ್ಯ ತಿರುಳಾಗಿದೆ. 
 
ತಾನು ಹೆತ್ತ ಮಗು ಹೆಣ್ಣಲ್ಲ, ಗಂಡು ಎಂದು ನಿರೂಪಿಸಲು ಆ ಮಗುವನ್ನು ಗಂಡು ಮಕ್ಕಳತೆಯೇ ಸಾಕುತ್ತಾಳೆ. ಇಲ್ಲಿ ಭವಾನಿಯ ಶೂರತ್ವದ ಭಾವವನ್ನು ತುಂಬುತ್ತಾಳೆ. ಅದೇ ರೀತಿ 
ಬೆಳೆಸುತ್ತಾಳೆ. ಇಲ್ಲಿ ಭವಾನಿಯ ಮುಖ್ಯ ಪಾತ್ರದಲ್ಲಿ ನಟಿ ಯಜ್ಞಾಶೆಟ್ಟಿ ನಟಿಸಿದ್ದಾರೆ. ಎದ್ದೇಳು ಮಂಜುನಾಥ ಸೇರಿದಂತೆ ಹಲವಾರು ಚಲನಚಿತ್ರಗಳ ಮೂಲಕ ಜನಪ್ರಿಯಳಾದ ಯಜ್ಞಶೆಟ್ಟಿ ವಾರಸ್ದಾರ ಮೂಲಕ ಕಿರುತೆರೆಗೂ ಕಾಲಿಟ್ಟಿದ್ದರು. 
 
ಈಕೆಗೆ ಮಗನಾಗಿ (ಳಾಗಿ) 5 ವರ್ಷದ ಪುಟ್ಟ ಹುಡುಗಿ ಚಿತ್ರಾಲಿ ತೇಜಪಾಲ್ ಅಭಿನಯಿಸುತ್ತಿದೆ. ಈ ಧಾರಾವಾಹಿಯಲ್ಲಿ ಈಕೆಯ ವಯಸ್ಸು 7 ವರ್ಷ ಎನ್ನುವುದು ಮತ್ತೊಂದು ವಿಶೇಷ. ಇದೇ ಫೆಬ್ರವರಿ 8 ರಿಂದ ಚಿತ್ರಾಲಿ ಸಿಂಹವಂಶದ ಹೆಣ್ಣು ವಾರಸ್ದಾರಳಾಗಿ ಕಿರುತೆರೆಯಲ್ಲಿ ಪ್ರತ್ಯಕ್ಷಳಾಗಲಿದ್ದಾಳೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ರಾತ್ರಿ 7.30 ರಿಂದ ಜೀ 
ಕನ್ನಡವಾಹಿನಿಯಲ್ಲಿ ‘ವಾರಸ್ದಾರ’ ಪ್ರಸಾರವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments