Webdunia - Bharat's app for daily news and videos

Install App

ಲಕ್ಷ್ಮೀ ಬಾರಮ್ಮಾ ಧಾರವಾಹಿಯಿಂದ ಹೊರಬಂದಿರುವ ಬಗ್ಗೆ ಸ್ಪಷ್ಟನೆ ನೀಡಿದ ನಟಿ ತನ್ವಿ ರಾವ್

Webdunia
ಭಾನುವಾರ, 30 ಜುಲೈ 2023 (17:02 IST)
Photo Courtesy: facebook
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸೂಪರ್ ಹಿಟ್ ಲಕ್ಷ್ಮೀ ಬಾರಮ್ಮಾ ಧಾರವಾಹಿಯಿಂದ ಕೀರ್ತಿ ಪಾತ್ರಧಾರಿ ನಟಿ ತನ್ವಿ ರಾವ್ ಹೊರಬಂದಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ.

ತನ್ವಿ ರಾವ್ ಮೂಲತಃ ಡ್ಯಾನ್ಸರ್. ರಾಧೆ ಶ್ಯಾಮ ಧಾರವಾಹಿಯ ನಾಯಕಿಯಾಗಿದ್ದರು. ಬಳಿಕ ಈಗ ಲಕ್ಷ್ಮೀ ಬಾರಮ್ಮಾ ಧಾರವಾಹಿಯಲ್ಲಿ ಕೀರ್ತಿ ಪಾತ್ರ ಮಾಡುತ್ತಿದ್ದರು. ಈ ಪಾತ್ರದ ಮೂಲಕ ಅವರು ಜನರಿಗೆ ಇಷ್ಟವಗಿದ್ದರು. ಆದರೆ ಕೆಲವು ದಿನಗಳಿಂದ ಅವರು ಧಾರವಾಹಿಯಿಂದ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಸುದ್ದಿ ಪ್ರೇಕ್ಷಕರಿಗೆ ನಿರಾಸೆ ತಂದಿತ್ತು.

ಆದರೆ ಈಗ ಅವರೇ ಸ್ಪಷ್ಟನೆ ನೀಡಿದ್ದು, ನಾನು ಧಾರವಾಹಿಯಿಂದ ಹೊರಬಂದಿಲ್ಲ. ನಾನು ಲಕ್ಷ್ಮೀ ಬಾರಮ್ಮಾ ಧಾರವಾಹಿಯನ್ನು ಬಿಡಲಿದ್ದೇನೆ ಎಂಬ ವದಂತಿ ಕೇಳ್ಪಟ್ಟೆ. ಇದು ಸತ್ಯವಲ್ಲ. ನನ್ನ ಬಗ್ಗೆ ಹೊಸ ಮಾಹಿತಿ ಇದ್ದರೆ ನನ್ನ ಸಾಮಾಜಿಕ ಜಾಲತಾಣ ಅಥವಾ ವೆಬ್ ಸೈಟ್ ಮೂಲಕ ತಿಳಿಸುತ್ತೇನೆ. ನಿಮ್ಮೆಲ್ಲರ ಪ್ರೀತಿ ಕಾಳಜಿಗೆ ಧನ್ಯವಾದಗಳು. ಮುಂದೆ ಕೂಡಾ ಧಾರವಾಹಿಗೆ ಇದೇ ರೀತಿ ಪ್ರೋತ್ಸಾಹವಿರಲಿ’ ಎಂದು ಹೇಳಿದ್ದಾರೆ.  ಆ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments