Webdunia - Bharat's app for daily news and videos

Install App

ಆಟೋ ಓಡಿಸಿ ಸಾರ್ವಜನಿಕರಿಗೆ ಸಹಾಯ ಮಾಡಿದ ನಟ ಧ್ರುವ ಸರ್ಜಾ!

Webdunia
ಶುಕ್ರವಾರ, 13 ಜುಲೈ 2018 (09:54 IST)
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹಲವು ರೀತಿಯ ರಿಯಾಲಿಟಿ ಶೋಗಳು ಬರುತ್ತಿವೆ. ಆದರೆ ಉದಯ ಟಿವಿಯಲ್ಲಿ ನಾಳೆಯಿಂದ ಮೂಡಿ ಬರಲಿರುವ ಸದಾ ನಮ್ಮೊಂದಿಗೆ ಎನ್ನುವ ರಿಯಾಲಿಟಿ ಶೋ ಹೊಸತನದಿಂದ ಕೂಡಿದೆ.
 

ಚಿತ್ರ ತಾರೆಯರು ಸಾಮಾನ್ಯರಂತೆ ಅಟೋ ಓಡಿಸುವುದು, ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುವುದು, ಅಂಗಡಿ ನೋಡಿಕೊಳ್ಳುವುದು ಇತ್ಯಾದಿ ಕೆಲಸಗಳನ್ನು ಮಾಡಿ ಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ಸಹಾಯ ಮಾಡುವುದು ಈ ರಿಯಾಲಿಟಿ ಶೋ ಉದ್ದೇಶ.

ಮೊದಲ ಸಂಚಿಕೆಯಲ್ಲಿ ನಟ ಧ್ರುವ ಸರ್ಜಾ ಅಟೋ ಓಡಿಸಿ ಹಣ ಕೂಡಿಸಿ ನರೇಂದ್ರ ಕುಮಾರ್ ಎಂಬವರಿಗೆ ಸಹಾಯ ಮಾಡಿದ್ದಾರೆ. ಭಾನುವಾರ ರಾತ್ರಿ 9 ಗಂಟೆಗೆ ಸದಾ ನಿಮ್ಮೊಂದಿಗೆ ಶೋನಲ್ಲಿ ಈ ದೃಶ್ಯಗಳನ್ನು ನೋಡಬಹುದಾಗಿದೆ. ಪಂಚಭಾಷಾ ತಾರೆ ಲಕ್ಷ್ಮಿ ಈ ಕಾರ್ಯಕ್ರಮದ ನಿರೂಪಕರಾಗಿರುತ್ತಾರೆ.

ಶನಿವಾರ ರಾತ್ರಿ 9 ಕ್ಕೆ ಸವಾಲ್ ಗೆ ಸೈ ಎನ್ನುವ ಮತ್ತೊಂದು ರಿಯಾಲಿಟಿ ಶೋ ಮೂಡಿಬರಲಿದ್ದು, ಇದರಲ್ಲಿ ಸಿನಿಮಾ ಮತ್ತು ಕಿರುತೆರೆಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಮನರಂಜನೆಯ ಕಾರ್ಯಕ್ರಮ ಇದಾಗಲಿದ್ದು, ಸವಾಲು ಜವಾಬುಗಳ ಮೋಜು ಇರಲಿದೆ. ಕಿರುತೆರೆಯಲ್ಲಿ ಖ್ಯಾತರಾಗಿರುವ ನಟಿ ನಿತ್ಯಾ ರಾಮ್ ಮತ್ತು ನಿರಂಜನ್ ದೇಶಪಾಂಡೆ ಈ ಕಾರ್ಯಕ್ರಮ ನಿರೂಪಿಸಲಿದ್ದಾರೆ.








ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments