Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಆರಿಸುವ ಜವಾಬ್ಧಾರಿ ವೀಕ್ಷಕರದ್ದೇ

Webdunia
ಭಾನುವಾರ, 7 ಏಪ್ರಿಲ್ 2019 (05:32 IST)
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಜೀ ಕನ್ನಡ ತನ್ನ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಆರಂಭಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ಅತಿಥಿಗಳು ಯಾರಾಗಬೇಕು ಎಂಬುದನ್ನು ನಿರ್ಧರಿಸುವ ಕೆಲಸ ಇದೀಗ ವೀಕ್ಷಕರಿಗೇ ಬಿಟ್ಟುಬಿಡಲಾಗಿದೆ.


ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಆರಂಭವಾಗುತ್ತದೆ ಎಂದಾಗಲೇ ಸಾಮಾಜಿಕ ಜಾಲತಾಣದ ಮೂಲಕ ವೀಕ್ಷಕರು ತಮ್ಮ ಇಷ್ಟದ ಯಾವೆಲ್ಲಾ ಸಾಧಕರು ಈ ಬಾರಿ ಸಾಧಕರ ಸೀಟ್ ನಲ್ಲಿ ಕೂರಬೇಕು ಎಂದು ತಮ್ಮ ಅಭಿಪ್ರಾಯ ಬರೆದುಕೊಂಡಿದ್ದರು.

ಇದೀಗ ಸ್ವತಃ ಜೀ ಕನ್ನಡ ಅಭಿಮಾನಿಗಳಿಗೆ ಇಂತಹದ್ದೊಂದು ಆಹ್ವಾನ ನೀಡಿದೆ. ಮೂರು ಸೀಸನ್ ಗಳಲ್ಲಿ ಭಾಗವಹಿಸಿದ ಅತಿಥಿಗಳ ಲಿಸ್ಟ್ ನೀಡಿದ್ದು, ಇವರ ಹೊರತಾಗಿ ಯಾರೆಲ್ಲಾ ಈ ಬಾರಿ ಕಾರ್ಯಕ್ರಮದಲ್ಲಿ ಬರಬೇಕೆಂದು ನೀವು ಬಯಸುತ್ತೀರಿ ಎಂದು ಕಾಮೆಂಟ್ ಮಾಡಿ ಎಂದು ಆಹ್ವಾನವಿತ್ತಿದೆ. ಇದೀಗ ವೀಕ್ಷಕರು ತಮಗೆ ತೋಚಿದ ಹಲವು ಸಾಧಕರ ಹೆಸರು ಹೇಳುತ್ತಿದ್ದಾರೆ. ಮೂಲಗಳ ಪ್ರಕಾರ ಮೊದಲ ಸಂಚಿಕೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬರುವುದು ಪಕ್ಕಾ ಆಗಿದೆ. ಅವರ ಹೊರತಾಗಿ ಯಾರೆಲ್ಲಾ ಬರಬೇಕು ನೀವೇ ಹೇಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments