ಜೀ ಕನ್ನಡದಲ್ಲಿ ಬರಲಿದೆ ಈ ಜನಪ್ರಿಯ ಧಾರವಾಹಿಯ ಎರಡನೇ ಭಾಗ: ನಾಯಕಿ ಯಾರು ಗೊತ್ತಾ?

Webdunia
ಸೋಮವಾರ, 11 ನವೆಂಬರ್ 2019 (09:11 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಜನಪ್ರಿಯವಾಗಿ ನಾಗಿಣಿ ಧಾರವಾಹಿ ಮುಕ್ತಾಯವಾಗಿರುವುದು ವೀಕ್ಷಕರಿಗೆ ಬೇಸರವುಂಟು ಮಾಡಿದೆ.


ಈ ಧಾರವಾಹಿಯ ನಾಯಕಿ ದೀಪಿಕಾ ದಾಸ್ ಈಗ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಯಾಗಿದ್ದಾರೆ. ಇತ್ತ ಧಾರವಾಹಿ ಅರ್ಜುನ್-ಅಮೃತಾ ವಿವಾಹದೊಂದಿಗೆ ಮುಕ್ತಾಯ ಕಂಡಿದೆ. ಆದರೆ ಧಾರವಾಹಿ ಮುಗಿಯಿತೆಂದು ವೀಕ್ಷಕರು ಬೇಸರಗೊಳ್ಳಬೇಕಿಲ್ಲ.

ಈ ಧಾರವಾಹಿಯ ಎರಡನೇ ಭಾಗ ಮತ್ತೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ನಾಗಿಣಿ 2 ಭಾಗವನ್ನು ಈ ಬಾರಿ ಪುಟ್ಟಗೌರಿ ಮದುವೆ ಧಾರವಾಹಿ ಖ್ಯಾತಿಯ ರಾಮ್ ಜಿ ನಿರ್ದೇಶಿಸುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ರಾಮ್ ಜಿ ಜೀ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಈ ಮೊದಲು ಇದೇ ವಾಹಿನಿಗಾಗಿ ರಾಮ್ ಜಿ ಸೊಸೆ ತಂದ ಸೌಭಾಗ್ಯ, ರಾಧಾ ಕಲ್ಯಾಣ ಎನ್ನುವ ಧಾರವಾಹಿಗಳನ್ನು ನಿರ್ದೇಶಿಸಿದ್ದರು.  ಈ ಬಾರಿ ಪುಟ್ಟಗೌರಿ ಮದುವೆ ಧಾರವಾಹಿಯಲ್ಲಿ ಹಿಮ ಪಾತ್ರ ಮಾಡಿದ್ದ ನಮ್ರತಾ ಗೌಡ ನಾಗಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments