Webdunia - Bharat's app for daily news and videos

Install App

ಜೀ ಕನ್ನಡದಲ್ಲಿ ಬರಲಿದೆ ಈ ಜನಪ್ರಿಯ ಧಾರವಾಹಿಯ ಎರಡನೇ ಭಾಗ: ನಾಯಕಿ ಯಾರು ಗೊತ್ತಾ?

Webdunia
ಸೋಮವಾರ, 11 ನವೆಂಬರ್ 2019 (09:11 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಜನಪ್ರಿಯವಾಗಿ ನಾಗಿಣಿ ಧಾರವಾಹಿ ಮುಕ್ತಾಯವಾಗಿರುವುದು ವೀಕ್ಷಕರಿಗೆ ಬೇಸರವುಂಟು ಮಾಡಿದೆ.


ಈ ಧಾರವಾಹಿಯ ನಾಯಕಿ ದೀಪಿಕಾ ದಾಸ್ ಈಗ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಯಾಗಿದ್ದಾರೆ. ಇತ್ತ ಧಾರವಾಹಿ ಅರ್ಜುನ್-ಅಮೃತಾ ವಿವಾಹದೊಂದಿಗೆ ಮುಕ್ತಾಯ ಕಂಡಿದೆ. ಆದರೆ ಧಾರವಾಹಿ ಮುಗಿಯಿತೆಂದು ವೀಕ್ಷಕರು ಬೇಸರಗೊಳ್ಳಬೇಕಿಲ್ಲ.

ಈ ಧಾರವಾಹಿಯ ಎರಡನೇ ಭಾಗ ಮತ್ತೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ನಾಗಿಣಿ 2 ಭಾಗವನ್ನು ಈ ಬಾರಿ ಪುಟ್ಟಗೌರಿ ಮದುವೆ ಧಾರವಾಹಿ ಖ್ಯಾತಿಯ ರಾಮ್ ಜಿ ನಿರ್ದೇಶಿಸುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ರಾಮ್ ಜಿ ಜೀ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಈ ಮೊದಲು ಇದೇ ವಾಹಿನಿಗಾಗಿ ರಾಮ್ ಜಿ ಸೊಸೆ ತಂದ ಸೌಭಾಗ್ಯ, ರಾಧಾ ಕಲ್ಯಾಣ ಎನ್ನುವ ಧಾರವಾಹಿಗಳನ್ನು ನಿರ್ದೇಶಿಸಿದ್ದರು.  ಈ ಬಾರಿ ಪುಟ್ಟಗೌರಿ ಮದುವೆ ಧಾರವಾಹಿಯಲ್ಲಿ ಹಿಮ ಪಾತ್ರ ಮಾಡಿದ್ದ ನಮ್ರತಾ ಗೌಡ ನಾಗಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments