Webdunia - Bharat's app for daily news and videos

Install App

ಐದು ದಿನದಲ್ಲಿ ಒಂದು ಲಕ್ಷ ಜನರಿಂದ ಹರಕೆಮುಡಿ ಅರ್ಪಣೆ

Webdunia
ವಿಜೃಂಭಣೆಯ ಬ್ರಹ್ಮೋತ್ಸವದ ಮೊದಲ ಐದು ದಿನಗಳಲ್ಲಿ ದಾಖಲೆ ಸಂಖ್ಯೆಯ ಭಕ್ತರು ತಿರುಮಲ ಸನ್ನಿಧಿಗೆ ಮುಡಿ ಒಪ್ಪಿಸಿದ್ದಾರೆ.

ಸೆ.15ರಂದು ಆರಂಭವಾದ ಒಂಬತ್ತು ದಿನಗಳ ಉತ್ಸವದಲ್ಲಿ ಬುಧವಾರದವರೆಗೆ ಸುಮಾರು ಒಂದು ಲಕ್ಷದಷ್ಟು ಮಂದಿ ಕೇಶ ಮುಂಡನ ಮಾಡಿಸಿದ್ದಾರೆ ಎಂದು ಟಿಟಿಡಿ ಕಲ್ಯಾಣಕಟ್ಟೆಯ ಉಪ ಕಾರ್ಯನಿರ್ವಹಣಾಧಿಕಾರಿ ವೆಂಕಟಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣಕಟ್ಟೆಯಲ್ಲಿ ಯಾತ್ರಾರ್ಥಿಗಳು ಕಾಯುವ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ, ಈಗಿರುವ 735 ಸಿಬ್ಬಂದಿಗಳ ಸಂಖ್ಯೆಗೆ ಹೊಸದಾಗಿ 40 ಮಹಿಳೆಯರೂ ಸೇರಿದಂತೆ 110 ಕ್ಷೌರಿಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ತಿರುಮಲ ತಿರುಪತಿ ದೇವಸ್ಥಾನ ಮಂಡಳಿಯ ನಿರ್ಣಯದ ಪ್ರಕಾರ, ಕಲ್ಯಾಣಕಟ್ಟೆಯಲ್ಲಿ ಭಕ್ತರಿಗೆ ಶ್ರೀಗಂಧದ ಬಿಲ್ಲೆಗಳನ್ನು ಉಚಿತವಾಗಿಯೇ ವಿತರಿಸಲಾಗುತ್ತಿದೆ. ತಂಪು ಅನುಭವ ನೀಡುವ ಚಂದನದ ಬಿಲ್ಲೆಗಳನ್ನು ನೀರಿನಲ್ಲಿ ಬೆರೆಸಿ, ಕೇಶಮುಂಡನದ ಬಳಿಕ ಹಚ್ಚಿಕೊಳ್ಳಲಾಗುತ್ತದೆ.

ವಾರ್ಷಿಕವಾಗಿ ಇಲ್ಲಿ ಸುಮಾರು 10 ಲಕ್ಷದಷ್ಟು ಯಾತ್ರಾರ್ಥಿಗಳು ಮುಂಡನ ಮಾಡಿಸಿಕೊಳ್ಳುತ್ತಾರೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Show comments