Webdunia - Bharat's app for daily news and videos

Install App

ಮೇಘಸ್ಫೋಟಕ್ಕೆ 17 ಬಲಿ!

Webdunia
ಗುರುವಾರ, 29 ಜುಲೈ 2021 (09:29 IST)
ಜಮ್ಮು/ಶಿಮ್ಲಾ(ಜು.29): ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಬುಧವಾರ ಮೇಘಸ್ಫೋಟವಾಗಿದ್ದು, 17 ಜನರು ಬಲಿಯಾಗಿದ್ದಾರೆ. ಕಾಶ್ಮೀರದಲ್ಲಿ 8 ಹಾಗೂ ಹಿಮಾಚಲದಲ್ಲಿ 9 ಜನ ಅಸುನೀಗಿದ್ದಾರೆ. ಪವಿತ್ರ ಅಮರನಾಥ ಗುಹೆ ಸನಿಹವೂ ಮೇಘಸ್ಫೋಟ ಸಂಭವಿಸಿದ್ದು, ಯಾತ್ರೆಯ ಸಮಯ ಇದಾಗಿರದ ಕಾರಣ ಯಾವುದೇ ಸಾವು-ನೋವು ವರದಿ ಆಗಿಲ್ಲ.

ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧ್ಯವಿರುವ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ. ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ:
ಕಿಶ್್ತವಾರ್ ಜಿಲ್ಲೆಯ ಕುಗ್ರಾಮ ಹೊನ್ಜಾರ್ ಎಂಬಲ್ಲಿ ಬುಧವಾರ ಬೆಳಗಿನ ಜಾವ 4.30ರ ವೇಳೆಗೆ ಎರಡು ಮೇಘಸ್ಪೋಟ ಸಂಭವಿಸಿದೆ. ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದರು, 17 ಜನರು ಗಾಯಗೊಂಡಿದ್ದಾರೆ. ಈ ಪೈಕಿ 5 ಜನರ ಸ್ಥಿತಿ ಗಂಭೀರವಾಗಿದೆ. ಇನ್ನೊಂದೆಡೆ ನಾಪತ್ತೆಯಾದ 14 ಜನರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಆದರೆ ಪ್ರತಿಕೂಲ ಪರಿಣಾಮದಿಂದಾಗಿ ಹೆಚ್ಚಿನ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತೆರಳುವುದಕ್ಕೆ ಅಡ್ಡಿಯಾಗಿದೆ. ಘಟನೆಯಲ್ಲಿ 6 ಮನೆ, ಒಂದು ಪಡಿತರ ಅಂಗಡಿ ಮತ್ತು ಒಂದು ಸೇತುವೆಗೆ ಹಾನಿಯಾಗಿದೆ. ಅಲ್ಲದೆ ಕಣಿವೆ ಪ್ರದೇಶಗಳಲ್ಲಿ ಪ್ರವಾಹ ಕಾಣಿಸಿಕೊಂಡಿದೆ.
ಹಿಮಾಚಲದಲ್ಲಿ:
ಹಿಮಾಚಲಪ್ರದೇಶದಲ್ಲಿ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ದಿಢೀರ್ ಪ್ರವಾಹ ಕಾಣಿಸಿಕೊಂಡಿದೆ. ಪರಿಣಾಮ ಕುಲು ಜಿಲ್ಲೆಯಲ್ಲಿ 4, ಚಂಬಾದಲ್ಲಿ ಒಬ್ಬರು ಮತ್ತು ಲಾಹುಲ್-ಸ್ಪಿಟಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಜೊತೆಗೆ ಲಾಹುಲ್ನಲ್ಲಿ 7 ಜನರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ನೆರವಿಗಾಗಿ ಐಟಿಬಿಪಿಯ ತಂಡವೊಂದನ್ನು ರವಾನಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments