Webdunia - Bharat's app for daily news and videos

Install App

10 ಕೋಟಿ ರೈತರ ಖಾತೆಗೆ 19,500 ಕೋಟಿ ರು.!

Webdunia
ಮಂಗಳವಾರ, 10 ಆಗಸ್ಟ್ 2021 (11:57 IST)
ನವದೆಹಲಿ(ಆ.10): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀಯ ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 9.75 ಕೋಟಿ ರೈತರಿಗೆ 19,500 ಕೋಟಿ ರು. ಹಣವನ್ನು ಸೋಮವಾರ ವರ್ಗಾವಣೆ ಮಾಡಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿ ರೈತರ ಖಾತೆಗೆ ಪ್ರತಿ ಕಂತಿನಲ್ಲಿ 2 ಸಾವಿರ ರು.ನಂತೆ ಮೂರು ಕಂತಿನಲ್ಲಿ ವಾರ್ಷಿಕ 6000 ರು.ಗಳನ್ನು ಬಿಡುಗಡೆ ಮಾಡುತ್ತಿದೆ. ಸೋಮವಾರ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ವೇಳೆ 9ನೇ ಕಂತಿನ ಹಣವನ್ನು ನರೇಂದ್ರ ಮೋದಿ ಅವರು ಫಲಾನುಭವಿಗಳಿಗೆ ಬಿಡುಗಡೆ ಮಾಡಿದರು. ಈ ಮೂಲಕ ಸರ್ಕಾರ ಇದುವರೆಗೆ ರೈತರ ಖಾತೆಗಳಿಗೆ 1.57 ಲಕ್ಷ ಕೋಟಿ ರು.ಗಳನ್ನು ವರ್ಗಾವಣೆ ಮಾಡಿದೆ.
2019ರ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯನ್ನು ಪ್ರಕಟಿಸಿತ್ತು. ನೇರವಾಗಿ ರೈತರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments