Webdunia - Bharat's app for daily news and videos

Install App

ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ : ಹವಾಮಾನ ಇಲಾಖೆ

Webdunia
ಭಾನುವಾರ, 11 ಡಿಸೆಂಬರ್ 2022 (11:19 IST)
ಬೆಂಗಳೂರು : ಮಾಂಡಸ್ ಚಂಡಮಾರುತದ ಎಫೆಕ್ಟ್ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ತಣ್ಣನೆಯ ವಾತಾವರಣ ಮುಂದುವರಿದಿದೆ. ನಿನ್ನೆಯಿಂದ ಜಡಿ ಮಳೆ ಕೂಡ ಹೆಚ್ಚಾಗಿದ್ದು, ಇನ್ನೂ ಮೂರು ದಿನ ಇದೇ ಪರಿಸ್ಥಿತಿ ಮುಂದುವರೆಯಲಿದೆ.

ಇಷ್ಟು ದಿನ ಊಟಿ, ಮಲೆನಾಡು ಭಾಗದಲ್ಲಿ ಕಂಡುಬರುತ್ತಿದ್ದ ತಣ್ಣನೆ ವಾತಾವರಣ ಇದೀಗ ಬೆಂಗಳೂರಿಗೂ ಶಿಫ್ಟ್ ಆಗಿದೆ. ಕಳೆದ ಎರಡು ದಿನದಿಂದ ಸೂರ್ಯನನ್ನೇ ಕಾಣದೆ ಕಂಗೆಟ್ಟಿರೋ ಬೆಂಗಳೂರಿಗರಿಗೆ ಇನ್ನು ಎರಡು-ಮೂರು ದಿನ ಇದೇ ರೀತಿಯ ವಾತಾವರಣನ್ನ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. 

ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಮಾಂಡಸ್ ಅಬ್ಬರದ ಎಫೆಕ್ಟ್ ಬೆಂಗಳೂರಿನ ಮೇಲೆ ಕೊಂಚ ಹೆಚ್ಚಾಗೆ ಬೀರುತ್ತಿದೆ. ಜೊತೆಗೆ ಇನ್ನೂ ಎರಡು ಮೂರು ದಿನಗಳ ಕಾಲ ಚಂಡಮಾರುತದ ಅಬ್ಬರ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೋಡದ ವಾತಾವರಣದ ಜೊತೆಗೆ ಶೀತಗಾಳಿ ಮತ್ತು ಕೆಲವೊಮ್ಮೆ ಜೋರು ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ತಜ್ಞ ಪ್ರಸಾದ್ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments