Webdunia - Bharat's app for daily news and videos

Install App

ಮನ್ ಕಿ ಬಾತ್ನಿಂದ 31 ಕೋಟಿ ಆದಾಯ!

Webdunia
ಮಂಗಳವಾರ, 20 ಜುಲೈ 2021 (15:29 IST)
ಹೊಸದಿಲ್ಲಿ(ಜು.20): 2014ರಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮ ಇದುವರೆಗೆ 30.80 ಕೋಟಿ ರೂ. ಗೂ ಅಧಿಕ ಆದಾಯ ಗಳಿಸಿದೆ. 2017-18ರಲ್ಲಿ ಈ ಕಾರ್ಯಕ್ರಮದ ಮೂಲಕ ಅತೀ ಹೆಚ್ಚು (10.64 ಕೋಟಿ) ಆದಾಯ ಬಂದಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.


* 2014ರಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮ
* ಮನ್ ಕಿ ಬಾತ್ನಿಂದ 31 ಕೋಟಿ ಆದಾಯ
* ರವಿವಾರ 11 ಗಂಟೆಗೆ ಆಲ್ ಇಂಡಿಯಾ ರೇಡಿಯೋದ ಎಲ್ಲಾ ಚಾನೆಲ್ಗಳು, ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ

‘ಮನ್ ಕಿ ಬಾತ್’ ಕಾರ್ಯಕ್ರಮ ಪ್ರತೀ ತಿಂಗಳ ಕೊನೆಯ ರವಿವಾರ 11 ಗಂಟೆಗೆ ಆಲ್ ಇಂಡಿಯಾ ರೇಡಿಯೋದ ಎಲ್ಲಾ ಚಾನೆಲ್ಗಳು, ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳ್ಥಲ್ಲಿ ಪ್ರಸಾರವಾಗುತ್ತದೆ. ‘ಇದುವರೆಗೆ ಒಟ್ಟು 78 ಎಪಿಸೋಡ್ಗಳು ಪ್ರಸಾರವಾಗಿದೆ. ಈ ಕಾರ್ಯಕ್ರಮ 91 ಖಾಸಗಿ ಸ್ಯಾಟಲೈಟ್ ಟಿವಿ ಚಾನೆಲ್ಗಳಲ್ಲಿಯೂ ಪ್ರಸಾರ ಮಾಡಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
2014-15ರಲ್ಲಿ 1.16 ಕೋಟಿ, 2015-16ರಲ್ಲಿ 2.81 ಕೋಟಿ, 2016-17ರಲ್ಲಿ 5.14 ಕೋಟಿ, 2017-18ರಲ್ಲಿ 10.64 ಕೋಟಿ ರೂ., 2018-19ರಲ್ಲಿ 7.47 ಕೋಟಿ, 20190-20ರಲ್ಲಿ 2.56 ಕೋಟಿ ಹಾಗೂ 2020-21ರಲ್ಲಿ 1.02 ಕೋಟಿ ರೂ. ಆದಾಯ ಗಳಿಸಿದೆ ಎಂದು ತಿಳಿಸಿದ್ದಾರೆ.
‘ರೇಡಿಯೋ ಮೂಲಕ ದೇಶದ ಎಲ್ಲಾ ಪ್ರಜೆಗಳನ್ನೂ ತಲುಪುವುದು ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಉದ್ದೇಶ. ಈ ಕಾರ್ಯಕ್ರಮ ಸರಕಾರದ ಜೊತೆ ಪ್ರಜೆಗಳಿಗೆ ಸಂಪರ್ಕ ಸಾಧಿಸಲು ಹಾಗೂ ಅವರಿಗೆ ಸಲಹೆ ನೀಡುವುದಕ್ಕೂ ಅವಕಾಶ ನೀಡಿದೆ’ ಎಂದು ಸಚಿವರು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments