Webdunia - Bharat's app for daily news and videos

Install App

40 ಪತ್ರಕರ್ತರು ಸೇರಿ 300 ಗಣ್ಯರ ಮೊಬೈಲ್ ಹ್ಯಾಕ್ !

Webdunia
ಸೋಮವಾರ, 19 ಜುಲೈ 2021 (09:35 IST)
ನವದೆಹಲಿ(ಜು.19): ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ನ ಇಬ್ಬರು ಸಚಿವರು, ಮೂವರು ವಿಪಕ್ಷ ನಾಯಕರು, ಓರ್ವ ನ್ಯಾಯಾಧೀಶ, ಉದ್ಯಮಿಗಳು, ಚಳವಳಿಗಾರರು ಮತ್ತು 40ಕ್ಕೂ ಹೆಚ್ಚು ಪತ್ರಕರ್ತರು ಸೇರಿದಂತೆ 300ಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳು ಹ್ಯಾಕ್ ಆಗಿರುವ ಮಾಹಿತಿ ಬಯಲಾಗಿದೆ.


* ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ನ ಇಬ್ಬರು ಸಚಿವರು ಸೇರಿ ಅನೇಕರ ಮೊಬೈಲ್ ಹ್ಯಾಕ್
* ಇಸ್ರೇಲ್ ಮೂಲದ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ಸಾಫ್ಟ್ವೇರ್ನಿಂದ ಈ ಮೊಬೈಲ್ ಸಂಖ್ಯೆಗಳು ಹ್ಯಾಕ್
* ಯಾವುದೇ ವ್ಯಕ್ತಿಗಳ ಮೇಲೆ ಯಾವುದೇ ರೀತಿಯಲ್ಲಿ ಕಣ್ಗಾವಲು ವಹಿಸಿಲ್ಲ ಎಂದ ಕಂಪನಿ
 ಸರ್ಕಾರಕ್ಕೆ ಮಾತ್ರ ಮಾರಾಟ ಮಾಡಲಾಗುವ ಇಸ್ರೇಲ್ ಮೂಲದ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ಸಾಫ್ಟ್ವೇರ್ನಿಂದ ಈ ಮೊಬೈಲ್ ಸಂಖ್ಯೆಗಳು ಹ್ಯಾಕ್ ಆಗಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ಒಕ್ಕೂಟ ವರದಿ ಮಾಡಿದೆ. ಆದರೆ ಯಾವುದೇ ವ್ಯಕ್ತಿಗಳ ಮೇಲೆ ಯಾವುದೇ ರೀತಿಯಲ್ಲಿ ಕಣ್ಗಾವಲು ವಹಿಸಿಲ್ಲ. ಎಂದು ಭಾರತ ಸರ್ಕಾರ ಹೇಳಿದೆ.
ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು ತನ್ನೆಲ್ಲಾ ಪ್ರಜೆಗಳ ಗೌಪ್ಯತೆಯ ಹಕ್ಕು ಮೂಲಭೂತ ಹಕ್ಕು ಎಂಬುದನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಜೊತೆಗೆ ಮಾಧ್ಯಮ ವರದಿಯನ್ನು ತನಿಖಾಧಿಕಾರಿ, ಪ್ರಾಸಿಕ್ಯೂಟರ್ ಮತ್ತು ತೀರ್ಪುಗಾರರ ಪಾತ್ರ ವಹಿಸುವ ಯತ್ನವನ್ನು ಭಾರತ ಸರ್ಕಾರ ತಳ್ಳಿ ಹಾಕಿದೆ.
ವಾಷಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್ ಸೇರಿದಂತೆ 16 ಅಂತಾರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಭಾರತದ ‘ದಿ ವೈರ್’ ವೆಬ್ಸೈಟ್ ವಿಶ್ವಾದ್ಯಂತ 50 ಸಾವಿರ ಮೊಬೈಲ್ ಸಂಖ್ಯೆಗಳನ್ನು ಇಸ್ರೇಲ್ನ ಕಣ್ಗಾವಲು ಕಂಪನಿ ಎನ್ಎಸ್ಒ ಗ್ರೂಪ್ನ ಪೆಗಾಸಸ್ ಸಾಫ್ಟ್ವೇರ್ನಿಂದ ಹ್ಯಾಕ್ ಮಾಡಲಾಗಿದೆ ಎಂದು ವರದಿ ಮಾಡಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣ: ಮಹೇಶ್ ಗುಪ್ತಾ, ಇತರ ಇಬ್ಬರಿಗೆ 2 ದಿನಗಳ ಪೊಲೀಸ್ ಕಸ್ಟಡಿ

ಭಾರತ ದೇಶ ಇವರ ಅಪ್ಪನ ಮನೆ ಆಸ್ತಿಯೇ: ಬಿಕೆ ಹರಿಪ್ರಸಾದ್ ಕಿಡಿ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments