Webdunia - Bharat's app for daily news and videos

Install App

ಭಾರತಕ್ಕೆ ಬಂತು 5ನೇ ಲಸಿಕೆ

Webdunia
ಭಾನುವಾರ, 8 ಆಗಸ್ಟ್ 2021 (08:25 IST)
ನವದೆಹಲಿ(ಆ.08): ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ದೇಶ, ಶನಿವಾರ ಮತ್ತೊಂದು ಆಶಾದಾಯಕ ಬೆಳವಣಿಗೆ ಕಂಡಿದೆ. ಶೇ.85ರಷ್ಟುಪರಿಣಾಮಕಾರಿ ಎಂದು ಸಾಬೀತಾಗಿರುವ ಅಮೆರಿಕದ ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆಯ ತುರ್ತುಬಳಕೆಗೆ ಶನಿವಾರ ಭಾರತ ಅನುಮೋದನೆ ನೀಡಿದೆ. ಇದರಿಂದಾಗಿ ದೇಶಕ್ಕೆ 5ನೇ ಲಸಿಕೆ ಪ್ರವೇಶಿಸಿದಂತಾಗಿದೆ.

ಶುಕ್ರವಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ, ಭಾರತದ ಔಷಧ ನಿಯಂತ್ರಣ ಸಂಸ್ಥೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಈ ಕೋರಿಕೆಗೆ ಅದೇ ದಿನ ಆನುಮೋದನೆ ದೊರಕಿದೆ. 18 ವರ್ಷ ಮೇಲ್ಪಟ್ಟವರಿಗೆ ಈ ಲಸಿಕೆ ನೀಡಲಾಗುತ್ತದೆ.
ಜಾನ್ಸನ್ ಕಂಪನಿಯ ಲಸಿಕೆಯ, ಇತ್ತೀಚೆಗೆ ವಿಶ್ವದಾದ್ಯಂತ ಅತ್ಯಂತ ಮಾರಕ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಡೆಲ್ಟಾತಳಿಯ ವೈರಸ್ಗಳ ಮೇಲೂ ಪರಿಣಾಮಕಾರಿ ಎಂದು ಸಾಬೀತಾಗಿದೆ. ಜೊತೆಗೆ ಒಂದು ಡೋಸ್ ಲಸಿಕೆ ಕನಿಷ್ಠ 8 ತಿಂಗಳವರೆಗೆ ದೇಹಕ್ಕೆ ರಕ್ಷಣೆ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
ಹೊಸ ಲಸಿಕೆ:
‘ಭಾರತ ತನ್ನ ಲಸಿಕೆಯ ‘ಬಾಸ್ಕೆಟ್’ ವಿಸ್ತರಿಸಿಕೊಳ್ಳುತ್ತಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ’ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪ್ರಕಟಿಸಿದ್ದಾರೆ. ಜಾನ್ಸನ್ ಕಂಪನಿ ಕೂಡ ಇದಕ್ಕೆ ಹರ್ಷ ವ್ಯಕ್ತಪಡಿಸಿದ್ದು, ಕೋವಿಡ್ ನಿರ್ಮೂಲನೆಯತ್ತ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದಂತಾಗಿದೆ ಎಂದಿದೆ.
ಈವರೆಗೆ ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್, ಸ್ಪುಟ್ನಿಕ್, ಮಾಡೆರ್ನಾ ಲಸಿಕೆಗಳು ಲಭ್ಯ ಇದ್ದವು. ಇವುಗಳ ಸಾಲಿಗೆ ಈಗ ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆ ಕೂಡ ಸೇರಿಕೊಂಡಂತಾಗಿದೆ. ಈವರೆಗೆ ಭಾರತದಲ್ಲಿರುವ ಬಹುತೇಕ ಲಸಿಕೆಗಳು ಎರಡು ಡೋಸ್ನದ್ದಾಗಿದ್ದರೆ, ಜಾನ್ಸನ್ ಲಸಿಕೆ ಸಿಂಗಲ್ ಡೋಸ್ನದ್ದಾಗಿದೆ.
ಈ ಮುಂಚೆ ಜಾನ್ಸನ್ ಕಂಪನಿ 3ನೇ ಹಂತದ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿತ್ತು. ಆದರೆ ವಿದೇಶದಲ್ಲಿ ಅನುಮೋದನೆ ಪಡೆದ ಲಸಿಕೆಗಳ ಪ್ರಯೋಗ ಭಾರತದಲ್ಲಿ ಅಗತ್ಯವಿಲ್ಲ ಎಂದು ಮೋದಿ ಸರ್ಕಾರ ಇತ್ತೀಚೆಗೆ ನಿಯಮ ಬದಲಿಸಿತ್ತು. ಈ ಪ್ರಕಾರ ಪ್ರಯೋಗದ ಅರ್ಜಿ ಹಿಂಪಡೆದಿದ್ದ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ, ತುರ್ತು ಬಳಕೆಗೆ ಅನುಮೋದನೆ ನೀಡಿ ಎಂದು ಶುಕ್ರವಾರ ಅರ್ಜಿ ಸಲ್ಲಿಸಿತ್ತು. ವಿದೇಶಗಳಲ್ಲಿ ಈ ಲಸಿಕೆ ಶೇ.85ರಷ್ಟು ಪರಿಣಾಮಕಾರಿ ಎಂದು ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments