Webdunia - Bharat's app for daily news and videos

Install App

ಭವ್ಯ ಭಾರತಕ್ಕೆ 75ನೇ ಅಮೃತ ಮಹೋತ್ಸವ

Webdunia
ಸೋಮವಾರ, 15 ಆಗಸ್ಟ್ 2022 (08:16 IST)
ನವದೆಹಲಿ : ಬ್ರಿಟಿಷರ ಕಪಿಮುಷ್ಠಿ, ದಬ್ಬಾಳಿಕೆ, ದೌರ್ಜನ್ಯದಿಂದ ದೇಶ ಮುಕ್ತಿಗೊಂಡು ಇಂದಿಗೆ 75 ವರ್ಷಗಳು.

ಈ ಹಿನ್ನೆಲೆಯಲ್ಲಿ, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಮೃತ ಮಹೋತ್ಸವವನ್ನು ದೇಶಾದ್ಯಂತ ಐತಿಹಾಸಿಕ, ಸ್ಮರಣಾತ್ಮಕವಾಗಿ ಆಚರಿಸಲಾಗ್ತಿದೆ.

ಪ್ರತಿ ಭಾರತೀಯನೂ ಹೆಮ್ಮೆಯಿಂದ ಸಂಭ್ರಮಿಸುವಂತಹ, ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಸ್ಮರಿಸುವ ದಿನ. ಪ್ರಧಾನಿ ಮೋದಿ ಅವರ `ಹರ್ ಘರ್ ತಿರಂಗ’ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ಸಿಕ್ಕಿದ್ದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡ್ತಿದೆ.

ಈಗಾಗಲೇ ಟ್ವಿಟರ್ನಲ್ಲಿ ದೇಶವಾಸಿಗಳಿಗೆ ಅಮೃತೋತ್ಸವದ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಇದೊಂದು ಅತ್ಯಂತ ವಿಶೇಷವಾದ ಸ್ವಾತಂತ್ರ್ಯೋತ್ಸವ. ಜೈ ಹಿಂದ್ ಅಂತ ಟ್ವೀಟ್ ಮಾಡಿದ್ದಾರೆ. ಇತ್ತ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಸತತ 9ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ಬಳಿಕ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಭಾಷಣದ ಮೇಲೆ ಹಲವು ನಿರೀಕ್ಷೆಗಳನ್ನು ದೇಶವಾಸಿಗಳು ಇಟ್ಟುಕೊಂಡಿದ್ದಾರೆ. ಅಮೃತ ಮಹೋತ್ಸವ ಹೊತ್ತಲ್ಲಿ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಇದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments