ಮನೆಗೆ ನೀರು ನುಗ್ಗಿದರೆ 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

Webdunia
ಬುಧವಾರ, 7 ಸೆಪ್ಟಂಬರ್ 2022 (06:14 IST)
ನವದೆಹಲಿ : ಸರಿಯಾದ ಚರಂಡಿಗಳನ್ನು ನಿರ್ಮಿಸಿ, ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮುನ್ಸಿಪಲ್ ಕಾರ್ಪೊರೇಷನ್ನ ಕರ್ತವ್ಯ.

ಮಳೆ ನೀರು ಮನೆಗೆ ನುಗ್ಗಿ, ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆದೇಶ ನೀಡಿದ ಕೋರ್ಟ್, ಅಧಿಕಾರಿಗಳ ವಿರುದ್ಧ ಚಾಟಿ ಬೀಸಿ 9 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ.

2010 ರಲ್ಲಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದ ಚರಂಡಿ ನೀರು ಮನೆಗೆ ನುಗ್ಗಿ ಅಪಾರ ನಷ್ಟವಾಗಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ಕರ್ತವ್ಯ ಲೋಪ ಪ್ರಶ್ನಿಸಿ ಲೀಲಾ ಮಾಥುರ್ ಅವರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಪಶ್ಚಿಮ ದೆಹಲಿಯಲ್ಲಿ ತಮ್ಮ ಮನೆ ನಿರ್ಮಿಸಿದಾಗ ಅದು ರಸ್ತೆಯ ಮಟ್ಟದಲ್ಲಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹಲವು ಬಾರಿ ರಸ್ತೆ ಪುನರ್ನಿರ್ಮಾಣದ ನಂತರ ರಸ್ತೆಯ ಮಟ್ಟವು ಏರಿ, ಮನೆ ತಗ್ಗು ಪ್ರದೇಶದಲ್ಲಿ ಉಳಿಯುವಂತೆ ಅಧಿಕಾರಿಗಳು ಮಾಡಿದ್ದಾರೆ.

ಇದರಿಂದ ಮಾನ್ಸೂನ್ ಮಳೆಯ ವೇಳೆ ಮನೆಗೆ ನೀರು ನುಗ್ಗಿದೆ. ಸಮಸ್ಯೆಯನ್ನು ಪರಿಹರಿಸಲು ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಗಮನ ಹರಿಸಲಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. 

ಎಂಸಿಡಿ ತನ್ನ ಕಾರ್ಯವೈಖರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವುದರಿಂದ, ಮೇಲ್ಮನವಿದಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು. ಹೀಗಾಗಿ ಪರಿಹಾರ ಹಣವನ್ನು 3 ಲಕ್ಷದಿಂದ 9 ಲಕ್ಷ ರೂ.ಗೆ ಏರಿಸಬೇಕು ಎಂದು ಕೋರ್ಟ್ ಆದೇಶ ನೀಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments