Webdunia - Bharat's app for daily news and videos

Install App

9 ಲಕ್ಷ ರು. ರಕ್ಷಿಸಲು 9 ತಾಸು ಬಸ್ ಮೇಲೆ ಕುಳಿತರು!

Webdunia
ಬುಧವಾರ, 28 ಜುಲೈ 2021 (09:07 IST)
ಮುಂಬೈ(ಜು.28): ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂಣ್ ನಗರದಲ್ಲಿ ಕಳೆದ ಗುರುವಾರ ಉಂಟಾದ ಪ್ರವಾಹದಿಂದಾಗಿ ಮುಂಬೈ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಮತ್ತು ಅವರ ಸಿಬ್ಬಂದಿ 9 ಗಂಟೆಗಳ ಕಾಲ, ಸಂಸ್ಥೆಯ 9 ಲಕ್ಷ ಹಣ ಉಳಿಸಲು ಬಸ್ಸಿನ ಮೇಲೆ ಹತ್ತಿ ಕುಳಿತಿದ್ದ ಘಟನೆ ನಡೆದಿದೆ.

* ಮಹಾರಾಷ್ಟ್ರ ಪ್ರವಾಹದ ವೇಳೆ ಡಿಪೋ ಮ್ಯಾನೇಜರ್
* 9 ಲಕ್ಷ ರು. ನೊಂದಿಗೆ ಬಸ್ ಟಾಪ್ ಮೇಲೆ ‘ಜೀವನ’
* ಎನ್ಡಿಆರ್ಎಫ್ ಸಿಬ್ಬಂದಿಯಿಂದ ಕೊನೆಗೆ ರಕ್ಷಣೆ
‘ಅಂದು ನಸುಕಿನ 4.30 ಗಂಟೆ. ಇಡೀ ಡಿಪೋ ನೀರಿನಿಂದ ಮುಳುಗಿ ಹೋಗಿತ್ತು. ಬಸ್ ಟಿಕೆಟ್ನಿಂದ ಸಂಗ್ರಹವಾಗಿದ್ದ 9 ಲಕ್ಷ ರು. ಡಿಪೋದಲ್ಲೇ ಇತ್ತು. ರಕ್ಷಣೆಗೆ ಬೇರಾವ ಸ್ಥಳವೂ ಲಭಿಸಲಿಲ್ಲ. ಬದುಕಲು ಹಾಗೂ ಹಣ ರಕ್ಷಿಸಲು ಅರ್ಧ ಮುಳುಗಿದ್ದ ಬಸ್ಸನ್ನು ಹತ್ತಿ ಕುಳಿತುಕೊಂಡೆವು’ ಎಂದು ರತ್ನಗಿರಿ ಡಿಪೋ ಮ್ಯಾನೇಜರ್ ರಣಜಿತ್ ರಾಜೆ ಹೇಳಿದರು.
‘ಕೇಂದ್ರ ವಿಪತ್ತು ನಿರ್ವಹಣಾ ದಳ ಬಂದು ರಕ್ಷಿಸುವವರೆಗೂ ಭಯದಲ್ಲೇ ಕಾಲ ಕಳೆಯುವಂತಾಗಿತ್ತು. ನೀರಿನ ಹರಿವು ತುಂಬಾ ಹೆಚ್ಚಾಗಿತ್ತು. ಯಾವ ಕ್ಷಣದಲ್ಲಾದರೂ ಬಸ್ಸು ಮಗುಚಿ ಬೀಳಬಹುದು ಎಂಬ ಭಯ ಕಾಡುತ್ತಿತ್ತು. 9 ತಾಸಿನ ಬಳಿಕ ಎನ್ಡಿಆರ್ಎಫ್ ಸಿಬ್ಬಂದಿ ನಮ್ಮನ್ನು ರಕ್ಷಿಸಿದರು’ ಎಂದು ಅವರು ವಿವರಿಸಿದರು.
‘ಅಣೆಕಟ್ಟಿನಿಂದ ನೀರು ಹೊರಬಿಟ್ಟಿದ್ದೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣವಾಯಿತು’ ಎಂದು ಅವರು ನುಡಿದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments