Webdunia - Bharat's app for daily news and videos

Install App

ಸಾರಿಗೆ ಇಲಾಖೆಯಿಂದ ಡೆಡ್‍ಲೈನ್?

Webdunia
ಸೋಮವಾರ, 10 ಅಕ್ಟೋಬರ್ 2022 (12:05 IST)
ಬೆಂಗಳೂರು : ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದ್ದು, ಆಪ್ ನೋಂದಣಿ ಆಟೋ ಚಾಲಕರಿಗೆ ಈಗ ಸೀಝ್ ಆತಂಕ ಹೆಚ್ಚಾಗಿದೆ.

ಈ ನಡುವೆ ಬಹುತೇಕ ಚಾಲಕರು ಆಪ್ ಬಳಕೆ ಮಾಡದಿರಲು ತೀರ್ಮಾನಿಸಿದ್ದು, ನಮಗೆ ಆಪ್ ಸಹವಾಸವೇ ಸಾಕಪ್ಪ ಅಂತಿದ್ದಾರೆ. ಹೌದು, ಆಪ್ ಆಧಾರಿತ ಆಟೋ ಸೇವೆಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ.

ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಹೆಚ್ಚಿಗೆ ಹಣವನ್ನ ಗ್ರಾಹಕರಿಂದ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ 3 ದಿನದಲ್ಲಿ ಈ ಬಗ್ಗೆ ಉತ್ತರ ಕೊಡುವಂತೆ ಸಾರಿಗೆ ಇಲಾಖೆ ಆಯುಕ್ತರು ಕಂಪನಿಗಳಿಗೆ ಸೂಚನೆ ನೀಡಿದ್ರು.

ಆದರೆ ಈ ಬಗ್ಗೆ ಕ್ಯಾರೆ ಎನ್ನದ ಕಂಪನಿಗಳು ಎಂದಿನಂತೆ ತಮ್ಮ ಹಳೇ ಛಾಳಿ ಮುಂದುವರೆಸಿದ್ದವು. ಈ ಕಾರಣಕ್ಕಾಗಿಯೇ ಸದ್ಯ ಮಂಗಳವಾರದಿಂದ ಆಪ್ ಬಂದ್ ಆಗುವ ಸಾಧ್ಯತೆಯಿದೆ. ಆಪ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ ಆಟೋಗಳಿಗೂ ಸೀಝ್ ಮಾಡುವ ಎಚ್ಚರಿಕೆ ನೀಡಿದೆ.

ಇನ್ನೂ ಸಾರಿಗೆ ಇಲಾಖೆ ಎಚ್ಚರಿಕೆ ಬೆನ್ನಲ್ಲೆ ಆಟೋ ಚಾಲಕರಿಗೂ ಆತಂಕ ಹೆಚ್ಚಾಗಿದೆ. ಸಾರಿಗೆ ಇಲಾಖೆ ವಾರ್ನಿಂಗ್ ಬೆನ್ನಲ್ಲೆ ಆಪ್ ಬಳಕೆ ಮಾಡದಿರಲು ಆಟೋ ಚಾಲಕರು ನಿರ್ಧಾರ ಮಾಡಿದ್ದು, ಓಲಾ, ಊಬರ್ ಆಪ್ ಬಂದ್ ಮಾಡಿದ್ರೆ ಒಳ್ಳೆಯದಾಗಲಿದೆ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments