Webdunia - Bharat's app for daily news and videos

Install App

ಸಾರಿಗೆ ಇಲಾಖೆಯಿಂದ ಡೆಡ್‍ಲೈನ್?

Webdunia
ಸೋಮವಾರ, 10 ಅಕ್ಟೋಬರ್ 2022 (12:05 IST)
ಬೆಂಗಳೂರು : ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದ್ದು, ಆಪ್ ನೋಂದಣಿ ಆಟೋ ಚಾಲಕರಿಗೆ ಈಗ ಸೀಝ್ ಆತಂಕ ಹೆಚ್ಚಾಗಿದೆ.

ಈ ನಡುವೆ ಬಹುತೇಕ ಚಾಲಕರು ಆಪ್ ಬಳಕೆ ಮಾಡದಿರಲು ತೀರ್ಮಾನಿಸಿದ್ದು, ನಮಗೆ ಆಪ್ ಸಹವಾಸವೇ ಸಾಕಪ್ಪ ಅಂತಿದ್ದಾರೆ. ಹೌದು, ಆಪ್ ಆಧಾರಿತ ಆಟೋ ಸೇವೆಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ.

ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಹೆಚ್ಚಿಗೆ ಹಣವನ್ನ ಗ್ರಾಹಕರಿಂದ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ 3 ದಿನದಲ್ಲಿ ಈ ಬಗ್ಗೆ ಉತ್ತರ ಕೊಡುವಂತೆ ಸಾರಿಗೆ ಇಲಾಖೆ ಆಯುಕ್ತರು ಕಂಪನಿಗಳಿಗೆ ಸೂಚನೆ ನೀಡಿದ್ರು.

ಆದರೆ ಈ ಬಗ್ಗೆ ಕ್ಯಾರೆ ಎನ್ನದ ಕಂಪನಿಗಳು ಎಂದಿನಂತೆ ತಮ್ಮ ಹಳೇ ಛಾಳಿ ಮುಂದುವರೆಸಿದ್ದವು. ಈ ಕಾರಣಕ್ಕಾಗಿಯೇ ಸದ್ಯ ಮಂಗಳವಾರದಿಂದ ಆಪ್ ಬಂದ್ ಆಗುವ ಸಾಧ್ಯತೆಯಿದೆ. ಆಪ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ ಆಟೋಗಳಿಗೂ ಸೀಝ್ ಮಾಡುವ ಎಚ್ಚರಿಕೆ ನೀಡಿದೆ.

ಇನ್ನೂ ಸಾರಿಗೆ ಇಲಾಖೆ ಎಚ್ಚರಿಕೆ ಬೆನ್ನಲ್ಲೆ ಆಟೋ ಚಾಲಕರಿಗೂ ಆತಂಕ ಹೆಚ್ಚಾಗಿದೆ. ಸಾರಿಗೆ ಇಲಾಖೆ ವಾರ್ನಿಂಗ್ ಬೆನ್ನಲ್ಲೆ ಆಪ್ ಬಳಕೆ ಮಾಡದಿರಲು ಆಟೋ ಚಾಲಕರು ನಿರ್ಧಾರ ಮಾಡಿದ್ದು, ಓಲಾ, ಊಬರ್ ಆಪ್ ಬಂದ್ ಮಾಡಿದ್ರೆ ಒಳ್ಳೆಯದಾಗಲಿದೆ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments