ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ ಸಾಕಷ್ಟು ಜೀವಗಳ ಬಲಿ !

Webdunia
ಬುಧವಾರ, 3 ಆಗಸ್ಟ್ 2022 (08:01 IST)
ಬೆಂಗಳೂರು  : ಹಲವು ದಿನಗಳಿಂದ ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ.
 
ಇಷ್ಟಕ್ಕೇ ನಿಲ್ಲದೇ ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಆಗ್ತಿದ್ದು, ಮಡಿಕೇರಿ ತಾಲೂಕಿನ ಕೊಯಿನಾಡು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮೇಲೆ ಬೃಹತ್ ಗುಡ್ಡ ಕುಸಿದಿದೆ.

ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪಯಸ್ವಿನಿ ನದಿ ನೀರು ಬಂದಿದ್ದು ರಸ್ತೆ ಬದಿಯ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆ ಮುಂಭಾಗದಲ್ಲಿ ನಿಲ್ಲಿಸಿದ ಕಾರುಗಳು ನೀರಿನ ರಭಸಕ್ಕೆ ತೇಲಾಡಿವೆ. 

ಪ್ರವಾಹದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೊಯನಾಡಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮ ಬಳಿ ವೇದಾವತಿ ನದಿ ಉಕ್ಕಿ ಹರಿಯುತ್ತಿದೆ.

ಸೇತುವೆ ದಾಟಲು ಹೋಗಿ ನದಿಗೆ ಲಾರಿ ಬಿದ್ದು ಕ್ಲೀನರ್ ಮತ್ತು ಚಾಲಕ ರಕ್ಷಣೆಗಾಗಿ ಪರದಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಋತುಚಕ್ರ ರಜೆ ತೀರ್ಪಿಗೆ ಕೆಲವೇ ಕ್ಷಣಗಳಲ್ಲಿ ಬದಲಾವಣೆ ಮಾಡಿದ ಹೈಕೋರ್ಟ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಗುದ್ದಾಟದಲ್ಲಿ ರೈತರು ಸಂಕಷ್ಟದಲ್ಲಿ: ಬಿವೈ ವಿಜಯೇಂದ್ರ

ವಿಧಾನಸಭೆ ಒಳಗೆಯೂ ಕಾಂಗ್ರೆಸ್ ಹೋರಾಟ: ಆರ್.ಅಶೋಕ್

ಮುಂದಿನ ಸುದ್ದಿ
Show comments