Webdunia - Bharat's app for daily news and videos

Install App

ಸಿಗ್ನಲ್‍ನಲ್ಲಿ ದಾರಿ ಬಿಡದಿದ್ದಕ್ಕೆ ಕಾರಿನಲ್ಲಿದ್ದ ಯುವತಿಗೆ ರೇಪ್ ಮಾಡುವುದಾಗಿ ಬೆದರಿಕೆಯೊಡ್ಡಿದ ಸವಾರ

Webdunia
ಸೋಮವಾರ, 1 ಅಕ್ಟೋಬರ್ 2018 (08:51 IST)
ಬೆಂಗಳೂರು : ಸಿಗ್ನಲ್‍ನಲ್ಲಿ ದಾರಿ ಬಿಡದಿದ್ದಕ್ಕೆ ಕಾರಿನಲ್ಲಿದ್ದ ಯುವತಿಯೊಬ್ಬಳಿಗೆ ಸ್ಕೂಟಿಯಲ್ಲಿದ್ದ  ಸವಾರನೊಬ್ಬ ರೇಪ್ ಮಾಡುವುದಾಗಿ ಬೆದರಿಕೆಯೊಡ್ಡಿದ ಘಟನೆ ಬೆಂಗಳೂರಿನ ತಿಲಕನಗರದ ಬಿಲಾಲ್ ಮಸೀದಿ ಬಳಿಯ ಸಿಗ್ನಲ್‍ನಲ್ಲಿ ನಡೆದಿದೆ.


ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿರುವ 26 ವರ್ಷದ ಯುವತಿ ಜಿಮ್‍ನಿಂದ ಬರುತ್ತಿದ್ದ ವೇಳೆ ತಿಲಕನಗರದ ಬಿಲಾಲ್ ಮಸೀದಿ ಬಳಿಯ ಸಿಗ್ನಲ್‍ನಲ್ಲಿ ರೆಡ್ ಲೈಟ್ ಬಿದ್ದಿದ್ದರಿಂದ ಕಾರು ನಿಲ್ಲಿಸಿದ್ದಾರೆ. ಆಗ ಕಾರಿನ ಹಿಂದೆ ನಿಂತಿದ್ದ ಸ್ಕೂಟಿ ಸವಾರ ಹಾರ್ನ್ ಹಾಕಿ, ದಾರಿ ಬಿಡುವಂತೆ ಕೇಳಿದ್ದಾನೆ. ಆದರೆ ಯುವತಿ ದಾರಿ ಬಿಡಲಿಲ್ಲ. ಇದರಿಂದ ಕೋಪಗೊಂಡ ಸವಾರ ಕಾರ್ ಬಳಿಗೆ ಬಂದು ಸಿಗ್ನಲ್ ಜಂಪ್ ಮಾಡು ಇಲ್ಲಾ ಅಂದ್ರೆ ನಾನು ರೇಪ್ ಮಾಡ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ.


ಆ ವೇಳೆ ಕಾರಿನ ಕ್ಯಾಮೆರಾದಲ್ಲಿ ಸವಾರನ ಫೋಟೋ ತೆಗೆದುಕೊಂಡ ಯುವತಿ, ತನಗಾದ ಅನ್ಯಾಯದ ಕುರಿತು ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಾ ಯುವತಿ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ದೂರಿನ ಹಿನ್ನೆಲೆಯಲ್ಲಿ ಸವಾರನನ್ನು ತಿಲಕನಗರ ಪೊಲೀಸರು ಠಾಣೆಗೆ ಕರೆಸಿದ್ದಾರೆ. ವಿಚಾರಣೆ ವೇಳೆ, ದಾರಿ ಬಿಡುವಂತೆ ಕೇಳಿದ್ದು ನಿಜ. ಆಕೆಯೇ ನನಗೆ ಮೊದಲು ಅವಾಚ್ಯ ಶಬ್ಧದಿಂದ ಬೈದಿದ್ದಾಳೆ. ನಾನು ಯಾವುದೇ ಅವಾಚ್ಯ ಶಬ್ಧದಿಂದ ಬೈದಿಲ್ಲ ಎಂದು ಹೇಳಿದ್ದಾನೆ.


ಇಬ್ಬರ ಆರೋಪಗಳನ್ನು ಆಲಿಸಿದ ಬಳಿಕ ಪ್ರಕರಣ ದಾಖಲಿಸಿಕೊಳ್ಳದೇ ರಾಜಿ ಸಂಧಾನ ಮಾಡಿಸಿ ಕಳುಹಿಸಿಕೊಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments