ಪಾದಯಾತ್ರೆ ಎರಡು ದಿನ ಕಡಿತ?

Webdunia
ಶುಕ್ರವಾರ, 4 ಮಾರ್ಚ್ 2022 (07:50 IST)
ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಕೆದಾಟು ಪಾದಯಾತ್ರೆಯ ಕೊನೆ ದಿನ ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
 
ನಾಳೆ ಬಜೆಟ್ ಅಧಿವೇಶನ ಇರುವುದರಿಂದ ನಮ್ಮ ಪಾದಯಾತ್ರೆಯನ್ನು ಎರಡು ದಿನ ಕಡಿತಗೊಳಿಸಿ ಇಂದೇ ಮುಕ್ತಾಯಗೊಳಿಸುತ್ತಿದ್ದೇವೆ. ರಾಮನಗರದಿಂದ ಬೆಂಗಳೂರಿನವರೆಗೆ ನಮ್ಮ ಪಾದಯಾತ್ರೆಗೆ ಜನ ಅತಿ ಹೆಚ್ಚು ಬೆಂಬಲ ನೀಡಿದ್ದಾರೆ. ನಮ್ಮೊಂದಿಗೆ ನಿಂತ ಎಲ್ಲರಿಗೂ ಪಕ್ಷದ ಪರವಾಗಿ ಕೃತಜ್ಞತೆ ಅರ್ಪಿಸುತ್ತೇನೆ.

ಶಿವರಾತ್ರಿ ದಿನ ಜನ ಕಡಿಮೆ ಸೇರಬಹುದು ಎಂಬ ನಿರೀಕ್ಷೆ ಇತ್ತು, ಆದರೆ ಅಂದೇ ಅತಿ ಹೆಚ್ಚು ಜನ ಸೇರಿದ್ದರು. ಅಂದರೆ ಹೋರಾಟದ ಮಹತ್ವ ರಾಜ್ಯದ ಜನರಿಗೆ ಅರ್ಥವಾಗಿದೆ ಎಂದರ್ಥ. ಕಾಂಗ್ರೆಸ್ ಅವರು ತೂಕ ಇಳಿಸಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ, ಬೆಂಗಳೂರು ನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮಾಡುತ್ತಿದ್ದಾರೆ.

ರಾಜಕೀಯ ಕಾರಣಕ್ಕೆ ಮಾಡುತ್ತಿದ್ದಾರೆ ಎಂಬೆಲ್ಲಾ ಟೀಕೆಗಳನ್ನು ಬಿಜೆಪಿ ಅವರು ಮಾಡಿದ್ದರು. ಆ ಎಲ್ಲ ಟೀಕೆಗಳಿಗೆ ಜನರೇ ಉತ್ತರ ನೀಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments