Webdunia - Bharat's app for daily news and videos

Install App

ಪಂಜಾಬ್‌ನಲ್ಲಿ AAP ಭರ್ಜರಿ ಮುನ್ನಡೆ

Webdunia
ಗುರುವಾರ, 10 ಮಾರ್ಚ್ 2022 (11:21 IST)
ಚಂಡೀಗಢ : ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ ೮೮ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಸಾಧನೆಯತ್ತ ಸಾಗಿದೆ.
 
ಕಳೆದ 70 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಆಳಿದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ  ಸಾಂಪ್ರದಾಯಿಕ ಪಕ್ಷಗಳಿಗಿಂತ ಈಗ ಎಎಪಿ ಮುನ್ನಡೆ ಸಾಧಿಸಲು ಐದು ಪ್ರಮುಖ ಕಾರಣಗಳಿವೆ. ಪಂಜಾಬ್ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಸರ್ಕಾರಗಳ ಆಡಳಿತವನ್ನು ನೋಡಿದ್ದರು.

ಹೊಸ ಪಕ್ಷಕ್ಕೆ ಅಧಿಕಾರ ನೀಡುವ ಬಯಕೆಯನ್ನು ಹೊಂದಿದ್ದರು. ಇದಕ್ಕೆ ಪೂರಕ ಎನ್ನುವಂತೆ ಒಂದು ಅವಕಾಶವನ್ನು ಎಎಪಿ ಕೇಳಿತ್ತು. ದೆಹಲಿ ಸರ್ಕಾರದ ಜನಪ್ರಿಯ ಯೋಜನೆಗಳು ಪಂಜಾಬ್ ಜನರ ಗಮನ ಸೆಳೆದಿವೆ.

ಶಾಲೆಗಳ ಅಭಿವೃದ್ಧಿ, ಉಚಿತ ವಿದ್ಯುತ್ – ನೀರು ಜನರನ್ನು ಸೆಳೆಯಲು ಮತ್ತೊಂದು ಕಾರಣವಾಗಿದೆ. ಬಿಜೆಪಿಗೆ ಅಸ್ತಿತ್ವ ಇಲ್ಲ, ಮಾಜಿ ಸಿಎಂ ಅಮರೀಂದರ್ ಸಿಂಗ್ ವಯಸ್ಸಿನ ಕಾರಣ ಪಂಜಾಬ್ ಜನರು ಕೈ ಬಿಟ್ಟರು ಎಂದು ವಿಶ್ಲೇಷಿಸಲಾಗಿದೆ.

ಅಕಾಲಿದಳ ಬಿಜೆಪಿ ಜೊತೆಗಿದ್ದ ಕಾರಣ ಮತ್ತು ಈಗಾಗಲೇ ಆಡಳಿತ ನೋಡಿರುವ ಕಾರಣ ಜನ ತಿರಸ್ಕರಿಸಿದ್ದಾರೆ. ಇನ್ನು ಕಾಂಗ್ರೆಸ್ ಒಳ ಬಂಡಾಯ, ನಾಯಕರ ನಡುವಿನ ಜಗಳ, ಸಿಎಂ ಅಭ್ಯರ್ಥಿ ಘೋಷಣೆ ವಿಳಂಬವೂ ಆಪ್ಗೆ ನೆರವುವಾಗಿದೆ.

ಕಳೆದ ಬಾರಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದ ಆಪ್ ಈ ಬಾರಿ ಅದ್ಭುತವಾಗಿ ಆಗಿ ಪ್ರಚಾರ ನಡೆಸಿತ್ತು. ಗೊಂದಲಗಳಿಗೆ ಅವಕಾಶ ನೀಡದೇ ಅಭಿವೃದ್ಧಿಯ ಮೇಲೆ ಚುನಾವಣೆಗೆ ತೆರಳಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments