Webdunia - Bharat's app for daily news and videos

Install App

ರಾಜಕೀಯಕ್ಕೆ ಅಭಿಷೇಕ್ ಎಂಟ್ರಿ ಕೊಡ್ತಾರಾ?

Webdunia
ಭಾನುವಾರ, 8 ಮೇ 2022 (08:49 IST)
ಬೆಂಗಳೂರು : ಇವತ್ತಿನಿಂದ ಆಪರೇಷನ್ ಹಳೆ ಮೈಸೂರು ಚಾಪ್ಟರ್ 1 ಶುರುವಾಗಿದೆ.
 
ಅಂಬಿ ಪುತ್ರ ಅಭಿಷೇಕ್ಗೆ ಬಿಜೆಪಿ ಗಾಳ ಹಾಕಿದ್ದು, ಮತ್ತೆ ಅಂಬಿ ಫ್ಯಾಮಿಲಿ ಮಂಡ್ಯ ಅಖಾಡಕ್ಕೆ ಇಳಿದರೆ ರಣಕಣ ಗ್ಯಾರಂಟಿ. ಹಾಗಾದರೆ ಸುಮಲತಾ ನಡೆ ಏನು? ಪುತ್ರನನ್ನ ರಾಜಕೀಯಕ್ಕೆ ಎಂಟ್ರಿ ಕೊಡಿಸ್ತಾರಾ ಎಂಬ ಕುತೂಹಲ ಇದೆ.

ಮಂಡ್ಯದಲ್ಲಿ ಯುವ ನಾಯಕತ್ವ ಬರುತ್ತೆ ಎಂದು ಸಿಎಂ ಸುಳಿವು ಕೊಟ್ಟ ಬೆನ್ನಲ್ಲೇ ಸಕ್ಕರೆ ನಗರಿಯಲ್ಲೀಗ ಅಂಬಿ ನೆನಪು. ಅಂಬರೀಷ್ ಚುನಾವಣೆ ಅಖಾಡದಲ್ಲಿ ಇರ್ತಾರೆ ಅಂದರೆ ಅದರ ಖದರ್ ಬೇರೆಯೇ ಇರುತ್ತಿತ್ತು. ಅಂಬಿ ಮಂಡ್ಯದ ಗಂಡಾಗಿ ರಾಜಕೀಯದಲ್ಲಿ ಹಲವು ಏಳುಬೀಳುಗಳನ್ನು ಸಹ ಕಂಡಿದ್ದರು.

ಇದೀಗ ಅಂಬರೀಷ್ ಫ್ಯಾಮಿಲಿಯನ್ನೇ ಬಿಜೆಪಿ ಕರೆತರಲು ನಾನಾ ರೀತಿಯ ತಂತ್ರಗಾರಿಕೆ ಶುರುವಾಗಿದೆ. ಅಭಿಷೇಕ್ ಕೂಡ ರಾಜಕೀಯಕ್ಕೆ ಎಂಟ್ರಿ ಮಾಡಿಸಲು ಬಿಜೆಪಿಯಿಂದ ಮಹಾ ಪ್ಲ್ಯಾನ್ ನಡೆದಿದೆ. ಮಂಡ್ಯದಲ್ಲಿ ಯುವ ನಾಯಕತ್ವ ಬರಲಿದೆ ಎಂದು ಸಿಎಂ ಹೇಳಿರುವುದರ ಹಿಂದೆ ಅಂಬರೀಷ್ ಅವರ ಮಗ ರಾಜಕೀಯ ಎಂಟ್ರಿ ಇದೆಯಾ ಎಂಬ ಕುತೂಹಲ ಮನೆ ಮಾಡಿದೆ.

 
ಒಟ್ಟಿನಲ್ಲಿ ಅಂಬಿ ಅಡ್ಡಾದಿಂದಲೇ ಆಪರೇಷನ್ ಓಲ್ಡ್ ಮೈಸೂರು ಶುರುವಾಗಿದ್ದು, ಇವತ್ತು ಮಂಡ್ಯದಿಂದ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಮುಂದೆ ಎರಡನೇ ಹಂತದಲ್ಲಿ ಅಭಿಷೇಕ್ ರಾಜಕೀಯ ಎಂಟ್ರಿಯ ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments