Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಎಸಿಬಿ ಶಾಕ್!

Webdunia
ಶುಕ್ರವಾರ, 17 ಜೂನ್ 2022 (09:10 IST)
ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಜೆಪಿ ನಗರದ ಶಿವಲಿಂಗಯ್ಯ ಅವರಿಗೆ ಸೇರಿದ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಲಿಂಗಯ್ಯ ಬಿಡಿಎನ ಗಾರ್ಡೇನೇಯರ್ ಆಗಿದ್ದಾರೆ. ಅಷ್ಟೇ ಅಲ್ಲದೇ ಬಸವನಗುಡಿ, ಕನಕಪುರ ರೋಡ್, ಹಾಗೂ ದೊಡ್ಡಕಲ್ಲಸಂದ್ರದ ಮನೆಗಳ ಮೇಲೆ ದಾಳಿ ನಡೆದಿದೆ. ಕೇವಲ ಬೆಂಗಳೂರೊಂದೇ ಅಲ್ಲದೇ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜನಾರ್ದನ್ ಹಾಗೂ ಅವರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಇದೀಗ ಜನಾರ್ದನ್ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ವಿಭಾಗದ ರಿಜಿಸ್ಟರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಚಂದ್ರಲೇಔಟ್ನಲ್ಲಿ ವಾಸಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments